Advertisement

ಯಲ್ಲಾಪುರ : ಕಾಂಗ್ರೆಸ್ ಪಕ್ಷದ ಮುಖಂಡರು ಬಿಜೆಪಿ ಸೇರ್ಪಡೆ

08:49 PM Jul 24, 2022 | Team Udayavani |

ಯಲ್ಲಾಪುರ: ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಅವರ ಜನಪರ ಕಾರ್ಯವನ್ನು ಹಾಗೂ ಬಿಜೆಪಿ ಪಕ್ಷದ ತತ್ವ ಸಿದ್ದಾಂತಗಳನ್ನು ಒಪ್ಪಿ ರವಿವಾರ ಬನವಾಸಿ ಹೋಬಳಿ ಬದನಗೋಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾಂಗ್ರೆಸ್ ಪಕ್ಷದ ಮುಖಂಡರು ಭಾರತೀಯ ಜನತಾ ಪಕ್ಷವನ್ನು ಸೇರ್ಪಡೆಗೊಂಡರು.

Advertisement

ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ಅವರು ಪಟ್ಟಣದ ಪಕ್ಷದ ಕಾರ್ಯಾಲಯದಲ್ಲಿ ಕಾಂಗ್ರೆಸ್ ಪಕ್ಷವನ್ನು ತೊರೆದ ಮುಖಂಡರುಗಳಿಗೆ ಭಾರತೀಯ ಜನತಾ ಪಕ್ಷದ ಶಾಲು ಹಾಕಿ ಪಕ್ಷಕ್ಕೆ ಬರಮಾಡಿಕೊಂಡರು.

ಈ ಸಂದರ್ಭದಲ್ಲಿ ಮಂಡಲಾಧ್ಯಕ್ಷ ಗೋಪಾಲಕೃಷ್ಣ ಎನ್.ಗಾಂವ್ಕರ್, ಬನವಾಸಿ ಭಾಗದ ಮುಖಂಡರಾದ ದ್ಯಾಮಣ್ಣ ದೊಡ್ಮನಿ, ಆರ್.ಪಿ.ಗೌಡ್ರು, ಶಿರಸಿ ಎ.ಪಿ.ಎಮ್.ಸಿ ಅಧ್ಯಕ್ಷರು ಹಾಗೂ ಬದನಗೋಡ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಪ್ರಶಾಂತ ಗೌಡ ಸಂತೊಳ್ಳಿ, ಪಕ್ಷದ ವಿವಿಧ ಸ್ಥರದ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next