Advertisement

ಯಲ್ಲಾಪುರ: ಅಪಘಾತದಲ್ಲಿ ಪ್ರಸಿದ್ಧ ಭಾಗವತ ಬಾಳೆಹದ್ದ ದಾರುಣ ಮೃತ್ಯು

01:08 PM Dec 14, 2022 | Team Udayavani |

ಯಲ್ಲಾಪುರ: ಎರಡು ಕಾರುಗಳ ನಡುವೆ ನಡೆದ ಅಪಘಾತದಲ್ಲಿ ಯಕ್ಷಗಾನ ಭಾಗವತಿಕೆ ಹಾಗೂ ಸಂಗೀತಗಾರರೂ ಆಗಿದ್ದ, ತಾಲೂಕಿನ ಭಾಗವತ ತಿಮ್ಮಪ್ಪ ಬಾಳೆಹದ್ದ (59) ಮಂಗಳವಾರ(ಡಿ.13) ಸಂಜೆ ನಿಧನರಾದರು.

Advertisement

ಶಿರಸಿ-ಯಲ್ಲಾಪುರ ರಾಜ್ಯ ಹೆದ್ದಾರಿ ಹಿತ್ಲಳ್ಳಿ ಕ್ರಾಸ್ ಬಳಿ ಅವರಿದ್ದ ಕಾರಿಗೆ, ಎದುರಿನಿಂದ ಬಂದ ಕಾರು ಡಿಕ್ಕಿಯಾದ ಪರಿಣಾಮ ಗಂಭೀರವಾಗಿ ಗಾಯಗೊಂಡ ಅವರನ್ನು ಶಿರಸಿಗೆ ಆಸ್ಪತ್ರೆಗೆ ದಾಖಲಿಸಿದ್ದರೂ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.

ಪ್ರಸಿದ್ಧ ಭಾಗವತರಾಗಿದ್ದ ತಂದೆ ಕೃಷ್ಣ ಭಾಗವತ ಅವರ ಬಳಿ ಭಾಗವತಿಕೆ ಕಲಿತ ಇವರು, ಶ್ರೀಪಾದ ಹೆಗಡೆ ಕಂಪ್ಲಿ ಅವರ ಬಳಿ ಸಂಗೀತ ಕಲಿತಿದ್ದರು. ಹೊಸ್ತೋಟ ಮಂಜುನಾಥ ಭಾಗವತರ ಶಿಷ್ಯರಾಗಿದ್ದರು. ತಾವೇ ಮಕ್ಕಳ ತಾಳಮದ್ದಲೆ ಕೂಟವನ್ನು ಹುಟ್ಟು ಹಾಕಿದ್ದರು. ಮಕ್ಕಳಿಗೆ ಯಕ್ಷಗಾನ ಅರ್ಥಗಾರಿಕೆ, ಭಾಗವತಿಕೆ, ಸಂಗೀತವನ್ನು ಕಲಿಸುತ್ತಿದ್ದರು. ನಾಟಕ ರಂಗಭೂಮಿಗೆ ಸಂಗೀತ ನೀಡುತ್ತಿದ್ದರು.

ಮೃತರು ತಂದೆ, ತಾಯಿ, ಓರ್ವ ಪುತ್ರ, ಪುತ್ರಿ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಯಕ್ಷಲೋಕ ಇವರ ದಾರುಣ ಸಾವಿಗೆ ಸಂತಾಪ ವ್ಯಕ್ತಪಡಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next