Advertisement

ಅಕ್ಟೋಬರ್‌ನಲ್ಲಿ ಯಶಸ್ವಿನಿ ಪುನರಾರಂಭ: ಸಚಿವ ಎಸ್‌.ಟಿ. ಸೋಮಶೇಖರ್‌

12:29 AM Jul 24, 2022 | Team Udayavani |

ಸುಬ್ರಹ್ಮಣ್ಯ: ಯಶಸ್ವಿನಿ ಯೋಜನೆಯನ್ನು ಅ. 2, ಗಾಂಧಿ ಜಯಂತಿ ಯಂದು ಮತ್ತೆ ಆರಂಭಿಸಲು ಸಿದ್ಧತೆ ನಡೆಸಲಾಗುತ್ತಿದೆ ಎಂದು ಸಹಕಾರ ಸಚಿವ ಎಸ್‌.ಟಿ. ಸೋಮಶೇಖರ್‌ ಹೇಳಿದ್ದಾರೆ.

Advertisement

ಗಾಂಧಿ ಜಯಂತಿಯಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಈ ಯೋಜನೆಗೆ ಚಾಲನೆ ನೀಡಲಿದ್ದಾರೆ ಎಂದು ಅವರು ಶನಿವಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಪತ್ರಕರ್ತರಿಗೆ ತಿಳಿಸಿದರು.

ಹೈನುಗಾರಿಕೆಯನ್ನು ಪ್ರೋತ್ಸಾಹಿಸುವ ಉದ್ದೇಶದ ನಂದಿನಿ ಕ್ಷೀರ ಸಮೃದ್ಧಿ ಬ್ಯಾಂಕನ್ನು ಕೂಡ ಅಕ್ಟೋಬರ್‌ನಲ್ಲಿ ಆರಂಭಿಸಲಾಗು ವುದು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next