Advertisement

ಯಶಸ್ವಿನಿ ಯೋಜನೆ ಮರು ಜಾರಿ

01:02 AM Feb 03, 2019 | |

ಮೈಸೂರು: ಸಿದ್ದರಾಮಯ್ಯ ಸರ್ಕಾರ ರದ್ದು ಮಾಡಿದ್ದ ಯಶಸ್ವಿನಿ ಯೋಜನೆಯನ್ನು ರಾಜ್ಯದಲ್ಲಿ ಮತ್ತೆ ಜಾರಿಗೊಳಿಸುವ ಬಗ್ಗೆ ಚಿಂತನೆ ನಡೆಸಿದ್ದು, ಈ ಬಜೆಟ್‌ನಲ್ಲಿ ಘೋಷಣೆ ಮಾಡುವುದಾಗಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು.

Advertisement

ಜಿಲ್ಲೆಯ ಸುತ್ತೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಯುಷ್ಮಾನ್‌ ಭಾರತ್‌ ಯೋಜನೆಯ ಅನುದಾನದಲ್ಲಿ ರಾಜ್ಯದ ಪಾಲು ಹೆಚ್ಚಿದೆ. ಆದರೂ, ಕೇಂದ್ರ ಸರ್ಕಾರದವರು ಇದು ನಮ್ಮ ಯೋಜನೆ ಎಂದು ಬೋರ್ಡ್‌ ಹಾಕಿಕೊಂಡು ತಿರುಗುತ್ತಿದ್ದಾರೆ. ಯೋಜನೆ ನಮ್ಮದು, ಹೆಸರು ಮಾತ್ರ ಮೋದಿ ಸರ್ಕಾರದ್ದು ಎಂದು ಟೀಕಿಸಿದರು. ಕೇಂದ್ರದ ಬಜೆಟ್ನಿಂದ ಕರ್ನಾಟಕಕ್ಕೆ ಯಾವುದೇ ಉಪಯೋಗವಿಲ್ಲ. ರಾಜ್ಯಕ್ಕೆ ಆಗಬೇಕಾದ ಕೆಲಸಗಳ ಬಗ್ಗೆ ಸಾಕಷ್ಟು ಮನವಿ ನೀಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದರು. ರೈತರಿಗೆ ವರ್ಷಕ್ಕೆ ಆರು ಸಾವಿರ ರೂ. ನೀಡುವುದಾಗಿ ಪ್ರಧಾನಿ ಹೇಳಿದ್ದಾರೆ. ಇದು ದಿನಕ್ಕೆ 17 ರೂ.ಆಗುತ್ತದೆ. ಈ 17 ರೂಪಾಯಿಯಿಂದ ರೈತ ಬದುಕಲು ಸಾಧ್ಯವಾಗುತ್ತದೆಯೇ ಎಂದು ಪ್ರಶ್ನಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next