Advertisement

ಯಶೋದಾ ಕೃಷ್ಣ ಬಹುಮಾನ ವಿತರಣೆ ಇಂದು

02:37 AM Sep 21, 2019 | mahesh |

ಉಡುಪಿ: ಶ್ರೀ ಕೃಷ್ಣಾಷ್ಣಮಿ ಪ್ರಯುಕ್ತ “ಉದಯವಾಣಿ’ಯು ನಗರದ ಗೀತಾಂಜಲಿ ಸಿಲ್ಕ್ಸ್ ನ ಸಹಯೋಗದಲ್ಲಿ ಏರ್ಪಡಿಸಿದ್ದ ಯಶೋದಾ ಕೃಷ್ಣ ಫೋಟೋ ಸ್ಪರ್ಧೆಯ ಬಹುಮಾನ ವಿತರಣೆ ಸಮಾರಂಭ ಶನಿವಾರ, ಸೆ.21ರಂದು ನಡೆಯಲಿದೆ.

Advertisement

ನಗರದ ಗೀತಾಂಜಲಿ ಸಿಲ್ಕ್ಸ್ ಮಳಿಗೆಯ ಎರಡನೇ ಮಹಡಿಯಲ್ಲಿ ಅಪರಾಹ್ನ 3 ಗಂಟೆಗೆ ಆರಂಭವಾಗುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ನೃತ್ಯಗುರು ವಿದುಷಿ ಲಕ್ಷ್ಮೀ ಗುರುರಾಜ್‌ ಭಾಗವಹಿಸಲಿದ್ದು, ಪ್ರಾಯೋಜಕರಾದ ಗೀತಾಂಜಲಿ ಸಿಲ್ಕ್ಸ್ ನ ಆಡಳಿತ ಪಾಲುದಾರರಾದ ರಾಮಕೃಷ್ಣ ನಾಯಕ್‌ ಮತ್ತು ಎಂಎಂಎನ್‌ಎಲ್‌ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ವಿನೋದ್‌ ಕುಮಾರ್‌ ಪಾಲ್ಗೊಳ್ಳುವರು.

ಇದೇ ಸಂದರ್ಭದಲ್ಲಿ ಸ್ವಾತಂತ್ರ್ಯೋತ್ಸವದ ಕುರಿತು “ಉದಯವಾಣಿ’ಯು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಪ್ರಬಂಧ ಸ್ಪರ್ಧೆಯ ವಿಜೇತರಿಗೂ ಬಹುಮಾನ ವಿತರಣೆ ನಡೆಯಲಿದೆ.

Advertisement

Udayavani is now on Telegram. Click here to join our channel and stay updated with the latest news.

Next