Advertisement

ಯಥಾಭವ ಪೋಸ್ಟರ್‌ ಬಿಡುಗಡೆ 

03:47 PM Jul 12, 2023 | Team Udayavani |

ಯುವ ಪ್ರತಿಭೆ ಗೌತಮ್‌ ಬಸವರಾಜು ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದು ನಿರ್ದೇಶಿಸಿರುವ “ಯಥಾಭವ’ ಸಿನಿಮಾದ ಚಿತ್ರೀಕರಣ ಇತ್ತೀಚೆಗೆ ಮುಕ್ತಾಯವಾಗಿದ್ದು, ಚಿತ್ರತಂಡ ಸಿನಿಮಾದ ಮೊದಲ ಪೋಸ್ಟರ್‌ ಅನ್ನು ಬಿಡುಗಡೆಗೊಳಿಸಿದೆ.

Advertisement

ಕೋರ್ಟ್‌ ರೂಮ್‌ ಡ್ರಾಮಾ ಕಥಾಹಂದರ ಹೊಂದಿರುವ “ಯಥಾಭವ’ ಸಿನಿಮಾದಲ್ಲಿ ಪವನ್‌ ಶಂಕರ್‌ ನಾಯಕನಾಗಿ ಹಾಗೂ ಸಹನಾ ಸುಧಾಕರ್‌ ನಾಯಕಿಯಾಗಿ ನಟಿಸಿದ್ದಾರೆ. ಉಳಿದಂತೆ ಹಿರಿಯ ನಟ ದತ್ತಣ್ಣ, ಗೋಪಾಲಕೃಷ್ಣ ದೇಶಪಾಂಡೆ, ಬಾಲ ರಾಜವಾಡಿ, ಮಾಸ್ಟರ್‌ ಸುಮಂತ್‌, ನೀನಾಸಂ ಆನಂದ್‌, ಉಮಾ ಹೆಬ್ಟಾರ್‌, ಗೌತಮ್‌ ಸುಧಾಕರ್‌ ಮುಂತಾದವರು ಸಿನಿಮಾದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

“ಮಾಚ್‌ ಎಂಟರ್‌ಟೈನ್ಮೆಂಟ್ಸ್‌’ ಬ್ಯಾನರ್‌ನಲ್ಲಿ ಸುಜಾತ ಕುಮಾರಿ ಹಾಗೂ ಅನಿಲ್‌ ಕುಮಾರ್‌ ಬಿ.ಎನ್‌. ಜಂಟಿಯಾಗಿ ನಿರ್ಮಾಣ ಮಾಡಿರುವ ಈ ಸಿನಿಮಾಕ್ಕೆ ಹರ್ಷ್‌ ಮಿಶ್ರ ಛಾಯಾಗ್ರಹಣ, ಹರೀಶ್‌ ಚೌಧರಿ ಸಂಕಲನವಿದೆ. ಸಿನಿಮಾದ ಹಾಡುಗಳಿಗೆ ಉತ್ಸವ್‌ ಶ್ರೇಯ್‌ ಸಂಗೀತ ಸಂಯೋಜಿಸಿದ್ದಾರೆ.

ಬೆಂಗಳೂರು ಸುತ್ತಮುತ್ತ “ಯಥಾಭವ’ ಸಿನಿಮಾದ ಬಹುತೇಕ ಚಿತ್ರೀಕರಣ ನಡೆಸಲಾಗಿದೆ. ಸದ್ಯ “ಯಥಾಭವ’ ಸಿನಿಮಾದ ಪೋಸ್ಟ್‌ ಪ್ರೊಡಕ್ಷನ್‌ ಕೆಲಸಗಳು ಭರದಿಂದ ನಡೆಯುತ್ತಿದ್ದು, ಇದೇ ವರ್ಷಾಂತ್ಯದಲ್ಲಿ ಸಿನಿಮಾವನ್ನು ಪ್ರೇಕ್ಷಕರ ಮುಂದೆ ತರುವ ಯೋಚನೆಯಲ್ಲಿದೆ ಚಿತ್ರತಂಡ.

Advertisement

Udayavani is now on Telegram. Click here to join our channel and stay updated with the latest news.

Next