Advertisement

ವರುಣಾ ಬಿಟ್ಟುಕೊಡಲು ಸಿದ್ಧ: ಡಾ.ಯತೀಂದ್ರ ಸಿದ್ದರಾಮಯ್ಯ

08:31 PM Oct 17, 2022 | Team Udayavani |

ಬೆಂಗಳೂರು: ವರುಣಾದಿಂದ ಸಿದ್ದರಾಮಯ್ಯ ಸ್ಪರ್ಧಿಸಿದರೆ ನಾನು ಬೇರೆ ಯಾವುದೇ ಕ್ಷೇತ್ರದಿಂದ ಸ್ಪರ್ಧಿಸದೆ ಅವರ ಪರ ಕೆಲಸ ಮಾಡುತ್ತೇನೆ ಎಂದು ಸಿದ್ದರಾಮಯ್ಯ ಅವರ ಪುತ್ರ ಹಾಗೂ ಶಾಸಕ ಡಾ| ಯತೀಂದ್ರ ಸಿದ್ದರಾಮಯ್ಯ ತಿಳಿಸಿದ್ದಾರೆ.

Advertisement

ಸುದ್ದಿಗಾರರ ಜತೆ ಮಾತನಾಡಿದ ಅವರು, ಸಿದ್ದರಾಮಯ್ಯ ಮುಂದಿನ ಚುನಾವಣೆಯಲ್ಲಿ ಎಲ್ಲಿಂದ ಸ್ಪರ್ಧಿಸಬೇಕು ಎಂಬುದು ಇನ್ನೂ ತೀರ್ಮಾನವಾಗಿಲ್ಲ. ಪ್ರಸ್ತುತ ಅವರು ಬಾದಾಮಿಯ ಶಾಸಕರಾಗಿದ್ದಾರೆ ಎಂದು ಹೇಳಿದರು.

ಈ ವಿಚಾರದಲ್ಲಿ ಕ್ಷೇತ್ರ ತ್ಯಾಗದ ಪ್ರಶ್ನೆ ಬರುವುದಿಲ್ಲ. ಪಕ್ಷದ ಆದೇಶ ಪಾಲನೆ ಅಷ್ಟೇ. ಅವರು ಸ್ಪರ್ಧಿಸಿದರೆ ನಾನು ಅಲ್ಲಿ ಕೆಲಸ ಮಾಡಲೇಬೇಕಾಗುತ್ತದೆ. ಅವರಿಗಾಗಿ ನಾನೊಬ್ಬನೇ ಅಲ್ಲ, ಹಲವು ಶಾಸಕರು ಕ್ಷೇತ್ರ ಬಿಟ್ಟುಕೊಡಲು ಸಿದ್ಧರಿದ್ದಾರೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next