Advertisement

Siddaramana Hundi; ಕಾರು-ಬೈಕ್ ಡಿಕ್ಕಿಯಿಂದ ಜಗಳ, ಬಿಜೆಪಿಯಿಂದ ರಾಜಕೀಯ ಬಣ್ಣ: ಯತೀಂದ್ರ

12:07 PM Apr 28, 2023 | Team Udayavani |

ಮೈಸೂರು: ಸಿದ್ದರಾಮನಹುಂಡಿಯಲ್ಲಿ ಕಾರು-ಬೈಕ್ ಡಿಕ್ಕಿಯಿಂದ ಜಗಳ ನಡೆದಿದೆ. ಬಿಜೆಪಿ ಅವರು ಇದಕ್ಕೆ ರಾಜಕೀಯ ಬಣ್ಣ ಬಳಿಯುತ್ತಿದ್ದಾರೆ ಎಂದು ವರುಣಾ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ .

Advertisement

ಸಿದ್ದರಾಮನಹುಂಡಿಯಲ್ಲಿ ಬಿಜೆಪಿ ಕಾರ್ಯಕರ್ತನ ಮೇಲೆ ಕಾಂಗ್ರೆಸ್ ಕಾರ್ಯಕರ್ತರ ಹಲ್ಲೆ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಬಗ್ಗೆ ಸ್ವತಃ ಯತೀಂದ್ರ ಸಿದ್ದರಾಮಯ್ಯ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ಸಿದ್ದರಾಮನಹುಂಡಿಯಲ್ಲಿ ಕಾರು-ಬೈಕ್ ಡಿಕ್ಕಿಯಿಂದ ಜಗಳ ನಡೆದಿದೆ. ಬಿಜೆಪಿ ಅವರು ಇದಕ್ಕೆ ರಾಜಕೀಯ ಬಣ್ಣ ಬಳಿಯುತ್ತಿದ್ದಾರೆ. ಬಿಜೆಪಿ ಅವರು ಗಲಭೆ ಮಾಡಿಸಲು ನಿಸ್ಸಿಮರು ಎಂದು ಕಿಡಿಕಾರಿದರು.

ಬಿಜೆಪಿ ಅವರು ಎಷ್ಟೇ ಪ್ರಚೋದನೆ ಮಾಡಿದರು‌ ಕಾಂಗ್ರೆಸ್ ಕಾರ್ಯಕರ್ತರು ಪ್ರಚೋದನೆಗೆ ಒಳಗಾಗಬಾರದು. ಬಿಜೆಪಿ ರಾಜಕೀಯ ಲಾಭಕ್ಕಾಗಿ ಈ ರೀತಿ ಕಾರ್ಯತಂತ್ರ ಮಾಡುತ್ತಿದೆ ಎಂದು ತಮ್ಮ ಕಾರ್ಯಕರ್ತರಿಗೆ ಕರೆ ನೀಡಿದರು.

ಗಲಾಟೆ ವೇಳೆ ಸಿದ್ದರಾಮಯ್ಯ ಕುಟುಂಬದವರು ಯಾರು ಅಲ್ಲಿ ಇರಲಿಲ್ಲ. ನಮ್ಮ ಸಂಬಂಧಿಕರ ಮನೆ ಮುಂದೆ ಘಟನೆ ಆಗಿದೆ ಅಷ್ಟೇ. ಆದರೂ ದುರುದ್ದೇಶದಿಂದ ನಮ್ಮ‌ ಕುಟುಂಬದ ಸದಸ್ಯರ ಮೇಲೆ ದೂರು ನೀಡಿದ್ದಾರೆ. ಅವರು ಎಷ್ಟೇ ಪ್ರಚೋದನೆ ಮಾಡಿದರು ಪ್ರಚೋದನೆಗೆ ಒಳಗಾಗಬೇಡಿ ಎಂದು ನಾನು ನಮ್ಮ‌ ಕಾರ್ಯಕರ್ತರಿಗೆ ಮನವಿ ಮಾಡುತ್ತೇನೆ .ದುರುದ್ದೇಶದಿಂದ ನಮ್ಮ‌ ಕುಟುಂಬದ ಸದಸ್ಯರ ಮೇಲೆ ದೂರು ನೀಡಿದ್ದಾರೆ ಎಂದರು.

 

Advertisement
Advertisement

Udayavani is now on Telegram. Click here to join our channel and stay updated with the latest news.

Next