Advertisement

ಶಾಸಕ ಯತೀಂದ್ರ ಸಿದ್ದರಾಮಯ್ಯ ಕಾರಿಗೆ ಗ್ರಾಮಸ್ಥರ ಮುತ್ತಿಗೆ 

12:45 PM Nov 27, 2018 | |

ಮೈಸೂರು: ಸನ್ಮಾನ ಕಾರ್ಯಕ್ರಮಕ್ಕೆ ಆಗಮಿಸದೆ ಇದ್ದ ಕಾರಣಕ್ಕೆ ಆಕ್ರೋಶಗೊಂಡ ಗ್ರಾಮಸ್ಥರು ಕಾಂಗ್ರೆಸ್‌ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಅವರ ಕಾರಿಗೆ ಮುತ್ತಿಗೆ ಹಾಕಿದ ಘಟನೆ ಮಂಗಳವಾರ ಟಿ.ನರಸೀಪುರದ ಕಿರಸಗೂರು ಗ್ರಾಮದಲ್ಲಿ ನಡೆದಿದೆ. 

Advertisement

ಕಿರಸಗೂರು ಗ್ರಾಮದಲ್ಲಿ  ಆಯೋಜಿಸಲಾಗಿದ್ದ ಕಾಂಗ್ರೆಸ್‌ ಕಾರ್ಯಕ್ರರ್ತರ ಸಭೆಯಲ್ಲಿ ಯತೀಂದ್ರ ಅವರಿಗೆ ಸನ್ಮಾನ ಹಮ್ಮಿಕೊಳ್ಳಲಾಗಿತ್ತು. ಆದರೆ ಅವರು ಆಗಮಿಸದೆ ಹುಣಸೂರಿನ ಇನ್ನೊಂದು ಕಾರ್ಯಕ್ರಮಕ್ಕೆ ತೆರಳಿರುವುದು ಆಕ್ರೋಶಕ್ಕೆ ಕಾರಣವಾಗಿದೆ ಎನ್ನಲಾಗಿದೆ. 

ಕಾರನ್ನು ಅಡ್ಡಗಟ್ಟಿದ ಕೆಲವರು ಯತೀಂದ್ರ ಅವರ ಬಳಿ ಯಾಕೆ ಬರಲಿಲ್ಲ ಎಂದು ಪ್ರಶ್ನಿಸಿದ್ದಾರೆ. ಯತೀಂದ್ರ ಅವರು ಕಾರನ್ನು ನಿಲ್ಲಿಸದೆ ಮುಂದೆ ಹೋಗಿದ್ದಾರೆ. 

Advertisement

Udayavani is now on Telegram. Click here to join our channel and stay updated with the latest news.

Next