Advertisement

ಪಿಎಸ್ಐ ಹಗರಣ ಮುಚ್ಚಿ ಹಾಕುವ ಹುನ್ನಾರ : ಯತ್ನಾಳ್ ಗಂಭೀರ ಆರೋಪ

04:17 PM Jul 11, 2022 | Team Udayavani |

ವಿಜಯಪುರ: ಪಿಎಸ್ಐ ನೇಮಕಾತಿ ಹಗರಣದಲ್ಲಿ ದೊಡ್ಡವರ ಪಾತ್ರವಿದೆ ಎಂಬ ಕಾರಣಕ್ಕೆ ಪ್ರಕರಣ ಮುಚ್ಚಿಹಾಕುವ ಕೆಲಸ ನಡೆದಿದೆ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಗಂಭೀರ ಆರೋಪ ಮಾಡಿದ್ದಾರೆ.

Advertisement

ಸೋಮವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಪಿಎಸ್ಐ ಅಕ್ರಮದಲ್ಲಿ ಪಾಲು ಎಲ್ಲರದ್ದೂ ಇದೆ.
ಹಗರಣದಲ್ಲಿ ಯಾರು ಯಾರು ಇದ್ದಾರೆ ಎಂದು ಬಹಿರಂಗ ಪಡಿಸಬೇಕು ಎಂದು ಆಗ್ರಹಿಸಿದರು.

ಸದರಿ ಹಗರಣದ ದೊಡ್ಡ ಪ್ರಮಾಣದಲ್ಲಿದೆ. ಮಾಜಿ‌ ಮುಖಮಂತ್ರಿಗಳ ಮಕ್ಕಳ ಪಾತ್ರವಿದೆ ಎಂಬ ಆರೋಪ ಕೇಳಿ ಬಂದಿದೆ. ಮಾಜಿ ಮುಖ್ಯಮಂತ್ರಿ ಎಂದರೆ ಸಿದ್ಧರಾಮಯ್ಯ ಅವರ ಮಗನೆ, ಎಚ್.ಡಿ.ಕುಮಾರಸ್ವಾಮಿ ಅವರ ಮಗನೆ ಎಂಬುದು ರಾಜ್ಯದ ಜನರಿಗೆ ಬಹಿರಂಗವಾಗಬೇಕು ಎಂದು ಆಗ್ರಹಿಸಿದರು.

ಪ್ರಕರಣದಲ್ಲಿ ದೊಡ್ಡವರ ಕೈವಾಡ ಇದೆ ಎಂದೇ ಇದನ್ನು ಮುಚ್ಚಿ ಹಾಕುವ ಹುನ್ನಾರ ನಡೆಸಿದ್ದಾರೆ. ಪ್ರಕರಣದ ವಿಚಾರಣೆ ನಡೆಸಿರುವ ನ್ಯಾಯಾಧೀಶರು ಸ್ಟ್ರಾಂಗ್ ಇದ್ದು, ಸರ್ಕಾರ ಇವರ ವರ್ಗಾವಣೆ ಮಾಡಬಾರದು ಎಂದು ಆಗ್ರಹಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next