Advertisement

ಅನುದಾನ ಹಿಂಪಡೆತ: ಸಿ.ಎಂ BSY ವಿರುದ್ಧ ಆರ್.ಅಶೋಕ್ ಎದುರು ಹರಿಹಾಯ್ದ ಯತ್ನಾಳ್

12:38 PM Aug 26, 2020 | Mithun PG |

ವಿಜಯಪುರ:  ಸಿಎಂ ಯಡಿಯೂರಪ್ಪ ವಿರುದ್ಧ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ, ವಿಜಯಪುರ ನಗರದಲ್ಲಿ ಕಂದಾಯ ಸಚಿವ ಆರ್. ಅಶೋಕ ಎದುರು ಅಸಮಾಧಾನ ಹೊರಹಾಕಿದ್ದಾರೆ.

Advertisement

ಬುಧವಾರ ನಗರದ ಜಿಲ್ಲಾ ಪಂಚಾಯತಿ ಸಭಾ ಭವನದಲ್ಲಿ ಕಂದಾಯ ಇಲಾಖೆ ಜಿಲ್ಲಾ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಯತ್ನಾಳ ಅಸಮಾಧಾನ ಹೊರ ಹಾಕಿದ್ದಾರೆ.

ವಿಜಯಪುರ ಮಹಾನಗರ ಪಾಲಿಕೆಗೆ ಕುಮಾರಸ್ವಾಮಿ ಸಿಎಂ ಅಗಿದ್ದಾಗ 125 ಕೋಟಿ ರೂ. ಅನುದಾನ ನೀಡಿದ್ದರು. ಆದರೆ ನಮ್ಮ ಸಿಎಂ ಯಡಿಯೂರಪ್ಪ ಅವರು ಕೋವಿಡ್ -19 ಹೆಸರಲ್ಲಿ ಅನುದಾನ  ಹಿಂಪಡೆದಿದ್ದಾರೆ ಎಂದು  ಸಭೆಯಲ್ಲಿ ಅಕ್ರೋಶ ಹೊರ ಹಾಕಿದರು. ಕೋವಿಡ್ ಹೆಸರಿನಲ್ಲಿ ಅಭಿವೃದ್ಧಿ ಯೋಜನೆಗಳಿಗೆ ಅನುದಾನ‌ ಕಡಿತ ಮಾಡಿದರೆ ಅಭಿವೃದ್ದಿ ಹೇಗೆ ಸಾಧ್ಯ ಎಂದು ಹರಿಹಾಯ್ದರು.

Advertisement

Udayavani is now on Telegram. Click here to join our channel and stay updated with the latest news.

Next