Advertisement

ಯಾತ್ರೆಗಳು ವರ್ಕೌಟ್ ಆಗಲ್ಲ: ಸಚಿವ ಆರ್‌.ಅಶೋಕ್‌

09:07 PM Nov 01, 2022 | Team Udayavani |

ಮಂಡ್ಯ: ಜೆಡಿಎಸ್‌ ಪಕ್ಷದ ಪಂಚರತ್ನ ರಥಯಾತ್ರೆ ಹಾಗೂ ಕಾಂಗ್ರೆಸ್‌ನ ತೋಡೋ ಯಾತ್ರೆಗಳು ಯಾವುದೇ ಕಾರಣಕ್ಕೂ ವರ್ಕೌಟ್ ಆಗಲ್ಲ. ಜನ ಬುದ್ಧಿವಂತರಾಗಿದ್ದಾರೆ ಎಂದು ಕಂದಾಯ ಸಚಿವ ಆರ್‌.ಅಶೋಕ್‌ ಜೆಡಿಎಸ್‌ಗೆ ಟಾಂಗ್‌ ನೀಡಿದರು.

Advertisement

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣಾ ಗಿಮಿಕ್‌ಗಾಗಿ ಈ ತರಹದ ರಥಯಾತ್ರೆಗಳು ನಡೆಯುತ್ತಿವೆ ಅಷ್ಟೇ. ಈ ಯಾತ್ರೆಗಳಿಂದ ಜನರ ಮೇಲೆ ಯಾವುದೇ ಇಂಪ್ಯಾಕ್ಟ್ ಆಗುವುದಿಲ್ಲ. ಕಾಂಗ್ರೆಸ್‌ನ ತೋಡೋ ಯಾತ್ರೆನೂ ಅಷ್ಟೇ ಪ್ರಯೋಜನಕ್ಕೆ ಬರಲ್ಲ ಎಂದರು.

ದೇಶದಲ್ಲಿ ಕಾಂಗ್ರೆಸ್‌ ಇಲ್ಲ: ದೇಶದಲ್ಲಿ ಜನ ಕಾಂಗ್ರೆಸ್‌ ಪಕ್ಷವನ್ನು ಫೆನಾಯಿಲ್‌ ಹಾಕಿ ತೊಳೆದು ಬಿಟ್ಟಿದ್ದಾರೆ. ನರೇಂದ್ರ ಮೋದಿ ಅವರು ಕಾಂಗ್ರೆಸ್‌ ಮುಕ್ತ ಮಾಡುತ್ತೇನೆಂದು ಹೇಳಿದ್ದರು. ಅದರಂತೆ ದೇಶಾದ್ಯಂತ ಕಾಂಗ್ರೆಸ್‌ ಮುಕ್ತವಾಗುತ್ತಿದೆ. ರಾಜಸ್ಥಾನದಲ್ಲಿ ಉಳಿದಿದೆ. ಅದೂ ಕೂಡ ಬೀಳುವುದಿತ್ತು. ಸದ್ಯದಲ್ಲಿ ಆ ಸರ್ಕಾರನೂ ಬಿದ್ದು ಹೋಗುತ್ತೆ ಎಂದು ಭವಿಷ್ಯ ಹೇಳಿದರು.

ಮುಂದಿನ ದಿನಗಳಲ್ಲಿ ಮಂಡ್ಯದ 7 ಕ್ಷೇತ್ರಗಳಲ್ಲಿಯೂ ಕಮಲ ಅರಳುತ್ತದೆ ಎಂಬ ವಿಶ್ವಾಸವಿದೆ. ಜಿಲ್ಲೆಯಲ್ಲಿ ಇನ್ನಷ್ಟು ಜನ ಬಿಜೆಪಿಗೆ ಸೇರ್ಪಡೆಗೊಳ್ಳಲಿದ್ದಾರೆ.

ಡಿಸೆಂಬರ್‌ಗೆ ಸ್ಪಷ್ಟ ಚಿತ್ರಣ ಹೊರ ಬೀಳಲಿದೆ. ಒಳ್ಳೆಯ ನಾಯಕರು ಬಿಜೆಪಿಗೆ ಬರಲಿದ್ದಾರೆ. ಈಗಾಗಲೇ ನಾರಾಯಣಗೌಡರು ಜಿಲ್ಲೆಯಲ್ಲಿ ಖಾತೆ ತೆರೆದಿದ್ದಾರೆ.

Advertisement

ಮುಂದಿನ ಚುನಾವಣೆಯಲ್ಲಿ ಮತ್ತಷ್ಟು ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾ ಸುವ ಮೂಲಕ ಕಮಲ ಅರಳಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next