Advertisement

ಪರಿಷತ್ ಚುನಾವಣೆ ಭಾರೀ ಅಂತರದಿಂದ ಗೆಲ್ಲುತ್ತೇವೆ: ಯಡಿಯೂರಪ್ಪ ವಿಶ್ವಾಸ

09:06 PM Jun 06, 2022 | Team Udayavani |

ಬೆಳಗಾವಿ : ವಾಯುವ್ಯ ಶಿಕ್ಷಕರ ಹಾಗೂ ಪದವೀಧರ ಕ್ಷೇತ್ರಗಳಲ್ಲಿ ನಾವು ಭಾರೀ ಅಂತರದಿಂದ ಗೆಲ್ಲುತ್ತೇವೆ ಎಂದು
ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.

Advertisement

ನಗರದಲ್ಲಿ ಸೋಮವಾರ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು ವಾಯುವ್ಯ ಪದವೀಧರ, ಶಿಕ್ಷಕರ ಕ್ಷೇತ್ರದ ಚುನಾವಣೆ ‌ಹಿನ್ನಲೆಯಲ್ಲಿ ಎರಡು ದಿನ ಬೆಳಗಾವಿ, ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ಹನುಮಂತ ನಿರಾಣಿ ಹಾಗೂ ಅರುಣ ಶಹಾಪುರ ಪರ ಪ್ರಚಾರ ಮಾಡಲಿದ್ದೇನೆ ಎಂದರು.

ನಿರಾಣಿ ಹಾಗೂ ಶಹಾಪುರ ಗೆಲುವು ನಿಶ್ಚಿತ. ಇದಲ್ಲದೆ ರಾಜ್ಯಸಭೆಯ ಮೂರು ಕ್ಷೇತ್ರದಲ್ಲಿ ನಾವು ಗೆಲ್ಲುತ್ತೇವೆ. ಪ್ರಧಾನಿ ಮೋದಿ ಆಶೀರ್ವಾದದಿಂದ ವಾತಾವರಣ ನಮ್ಮ ಪರ ಇದೆ ಎಂದು ಹೇಳಿದರು.

ಹನುಮಂತ ನಿರಾಣಿ ಅವರ ಗೆಲುವಿನ ಅಂತರ 50 ಸಾವಿರ ಆಗಲಿದೆ. ಶಹಾಪುರ 15 ಸಾವಿರ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ವಿಮಾನ ನಿಲ್ದಾಣದಲ್ಲಿ ಸಿದ್ದರಾಮಯ್ಯ ಭೇಟಿ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು ಯಾವುದೇ ರಾಜಕೀಯ ವಿಚಾರ ಚರ್ಚೆ ಆಗಿಲ್ಲ. ಅವರು ಹುಬ್ಬಳ್ಳಿ ಹೋಗುತ್ತೇನೆ ಎಂದರು.ನಾನು ಬೆಳಗಾವಿಗೆ ಹೋಗಿ ಪ್ರಚಾರ ಮಾಡುತ್ತೇವೆ ಎಂದು ಹೇಳಿದೆ.

ವಿರೋಧ ಪಕ್ಷದಲ್ಲಿ ಇದ್ದ ಮಾತ್ರಕ್ಕೆ ವಿರೋಧ ಮಾಡಬೇಕು ಅಂತೇನಿಲ್ಲ. ಆತ್ಮೀಯತೆ, ವಿಶ್ವಾಸಕ್ಕೆ ರಾಜಕೀಯಕ್ಕೆ ಯಾವುದೇ ಸಂಬಂಧವಿಲ್ಲ ಎಂದರು. ಆರ್ ಎಸ್ ಎಸ್ ವಿರುದ್ಧ ಕಾಂಗ್ರೆಸ್ ಅಭಿಯಾನದ ಬಗ್ಗೆ ನಾನು ಯಾವುದೇ ಪ್ರತಿಕ್ರಿಯೆ ಕೊಡುವುದಿಲ್ಲ ಎಂದು ಯಡಿಯೂರಪ್ಪ ಸ್ಪಷ್ಟಪಡಿಸಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next