Advertisement

ಬಿಎಸ್‌ವೈ ಸರ್ಕಾರ ಸುಭದ್ರ: ಯತ್ನಾಳ

11:04 PM Sep 20, 2019 | Lakshmi GovindaRaju |

ಕನಕಗಿರಿ: ಯುಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಸುಭದ್ರವಾಗಿದ್ದು, ಉಳಿದ ಅವ ಧಿಯನ್ನು ಪೂರ್ಣಗೊಳಿಸಲಿದೆ ಎಂದು ಶಾಸಕ ಬಸವನಗೌಡ ಪಾಟೀಲ ಯತ್ನಾಳ ಹೇಳಿದರು. ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ಕೇಂದ್ರ ಸರ್ಕಾರದ ತಜ್ಞರ ತಂಡ ನೆರೆ ಸಮೀಕ್ಷೆ ನಡೆಸಿ ವರದಿ ನೀಡಿದೆ. ಶೀಘ್ರವೇ ವಿಶೇಷ ಪ್ಯಾಕೆಜ್‌ ಘೋಷಣೆಯಾಗಲಿದ್ದು, ಈಗಾಗಲೇ ರಾಜ್ಯ ಸರ್ಕಾರದಿಂದ ಮೂಲ ಸೌಕರ್ಯಕ್ಕೆ ಆದ್ಯತೆ ನೀಡಲಾಗಿದೆ.

Advertisement

ವಿರೋಧ ಪಕ್ಷದವರು ಟೀಕೆ ಮಾಡುವುದರಲ್ಲಿ ಯಾವುದೇ ಅರ್ಥವಿಲ್ಲ. ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿರುವ ಯಾವ ಹೇಳಿಕೆಗಳು ಸತ್ಯವಾಗಿಲ್ಲ. ನಿಜಾಮರು ನಡೆಸಿದ ಗುಲಾಮಗಿರಿ ಕಹಿ ನೆನಪನ್ನು ಮರೆಸಲು ರಾಜ್ಯ ಸರ್ಕಾರ ಹೈಕ ಭಾಗಕ್ಕೆ ಕಲ್ಯಾಣ ಕರ್ನಾಟಕ ಎಂದು ನಾಮಕರಣ ಮಾಡಿದೆ. ಈ ಭಾಗದ ಅಭಿವೃದ್ಧಿಗೆ ಸಿಎಂ ಯಡಿಯೂರಪ್ಪ ವಿಶೇಷ ಆಸಕ್ತಿ ಹೊಂದಿದ್ದಾರೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next