Advertisement

ಯಡಿಯೂರಪ್ಪ ಡಿಸ್ಟರ್ಬ್ ಆಗಿದ್ದಾರೆ, ಪಾಪ ದೇವರು ಅವರಿಗೆ… : ಸಿದ್ದರಾಮಯ್ಯ

09:48 PM Feb 23, 2023 | Team Udayavani |

ವಿಜಯಪುರ: ಮುಖ್ಯಮಂತ್ರಿ ಸ್ಥಾನದಿಂದ ಇಳಿದ ಮೇಲೆ ಯಡಿಯೂರಪ್ಪ ಮಾನಸಿಕವಾಗಿ ಡಿಸ್ಟರ್ಬ್ ಆಗಿದ್ದಾರೆ. ಹೀಗಾಗಿ ಪಾಪ ದೇವರು ಅವರಿಗೆ ಆಯುಷ್ಯ, ಆರೋಗ್ಯ ನೀಡಲಿ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.

Advertisement

ಗುರುವಾರ ವಿಜಯಪುರ ಜಿಲ್ಲೆಯಲ್ಲಿ ಪ್ರಜಾಧ್ವನಿ ಕಾರ್ಯದದ ಸಂದರ್ಭದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ನನ್ನ ಮೇಲಿನ ಅತಿಯಾದ ಪ್ರೀತಿಯಿಂದ ಬಾದಾಮಿಯಲ್ಲಿ ಸ್ಪರ್ಧೆ ಮಾಡುವಂತೆ ಯಡಿಯೂರಪ್ಪ ಸಲಹೆ ನೀಡಿದ್ದಾರೆ. ಇದಕ್ಕಾಗಿ ಅವರಿಗೆ ಧನ್ಯವಾದ ತಿಳಿಸುವುದಾಗಿ ಹೇಳಿದರು.

ನಾನು ಬಾದಾಮಿ ಕ್ಷೇತ್ರದಲ್ಲಿ ಮತ್ತೆ ಸ್ಪರ್ಧಿಸಿದರೆ ಗೆಲ್ಲುವುದಿಲ್ಲ ಅಂತೇನಲ್ಲ. ಬಾದಾಮಿಯಲ್ಲಿ ನೂರಕ್ಕೆ ನೂರರಷ್ಟು ಗೆಲ್ಲುತ್ತೇನೆ. ಕಳೆದ ಐದು ವರ್ಷ ಬಾದಾಮಿ ಶಾಸಕನಾಗಿ ಕ್ಷೇತ್ರದ ಜನರಿಗೆ ಅನುಕೂಲ ಆಗುವಂತೆ ಅಭಿವೃದ್ಧಿ ಕೆಲಸ ಮಾಡಿದ್ದೇನೆ. ಅಲ್ಲಿನ ಮತದಾರರ ಕಷ್ಟ-ಸುಖಕ್ಕೆ ಸ್ಪಂದಿಸಿದ್ದೇನೆ. ಹೀಗಾಗಿ ಜನರಿಗೆ ದ್ರೋಹ ಮಾಡುವ ಪ್ರಶ್ನೆಯೇ ಯದ್ಭವಿಸುವುದಿಲ್ಲ ಎಂದರು.

ನಾನು ಎಲ್ಲಿಂದ ಸ್ಪರ್ಧಿಸಬೇಕು ಎನ್ನುವುದನ್ನು ಕಾಂಗ್ರೆಸ್ ಪಕ್ಷ ತೀರ್ಮಾನಿಸಲಿದೆ. ನಾನು ಎಲ್ಲಿಂದ ಸ್ಫರ್ಧಿಸುತ್ತೇನೆ ಎನ್ನುವುದನ್ನು ನಾನೇ ಹೇಳ್ತೆನೆ, ಅದರ ಮಾತನಾಡಲು, ತೀರ್ಮಾನಿಸಲು ಯಡಿಯೂರಪ್ಪ ಯಾರು ಎಂದು ಟೀಕಾ ಪ್ರಹಾರ ನಡೆಸಿದರು.

Advertisement

Udayavani is now on Telegram. Click here to join our channel and stay updated with the latest news.

Next