Advertisement

ಯಡಿಯೂರಪ್ಪ ಯಾವುದೋ ಒಂದು ಜಾತಿಗೆ ಸೀಮಿತವಾದ ನಾಯಕರಲ್ಲ: ಬಿ.ವೈ.ವಿಜಯೇಂದ್ರ

06:49 PM Feb 26, 2023 | Team Udayavani |

ಶಿವಮೊಗ್ಗ: ಯಡಿಯೂರಪ್ಪ ಯಾವುದೋ ಒಂದು ಜಾತಿಗೆ ಸೀಮಿತವಾದ ನಾಯಕರಲ್ಲ.ಅಧಿಕಾರದ ಅವಧಿಯಲ್ಲಿ ಎಲ್ಲಾ ವರ್ಗಕ್ಕೂ ಅನುದಾನ ಕೊಟ್ಟಿದ್ದಾರೆ ಎಂದು ಬಿ.ವೈ.ವಿಜಯೇಂದ್ರ ಭಾನುವಾರ ಹೇಳಿಕೆ ನೀಡಿದ್ದಾರೆ.

Advertisement

ಶಿವಮೊಗ್ಗ ಏರ್ಪೋರ್ಟ್ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದ್ದು, ಬಿ.ವೈ.ವಿಜಯೇಂದ್ರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಯಡಿಯೂರಪ್ಪ ಅವರ ದೂರ ದೃಷ್ಟಿಯಿಂದ ರಾಜ್ಯದಲ್ಲೆ 2ನೇ ದೊಡ್ಡ ವಿಮಾನ ನಿಲ್ದಾಣ ಶಿವಮೊಗ್ಗದಲ್ಲಿ ನಿರ್ಮಾಣಗೊಂಡಿದೆ. ಕೆಂಪೇಗೌಡ ವಿಮಾನ ನಿಲ್ದಾಣ ಹೊರತುಪಡಿಸಿದರೆ ಶಿವಮೊಗ್ಗ ಏರ್ಪೋರ್ಟ್ ರಾಜ್ಯದಲ್ಲಿ ಅತಿ ದೊಡ್ಡದು‌.ಯಡಿಯೂರಪ್ಪ ಅವರ ಜನ್ಮ ದಿನದಂದೇ ವಿಮಾನ ನಿಲ್ದಾಣ ಉದ್ಘಾಟನೆಯಾಗುತ್ತಿರುವುದು ಖುಷಿಯ ಸಂಗತಿ.ಮಲೆನಾಡು ಜಿಲ್ಲೆಗಳಿಗೆ ಮಾತ್ರವಲ್ಲದೆ ಮಧ್ಯ ಕರ್ನಾಟಕ ಭಾಗದ ಜಿಲ್ಲೆಗಳಿಗೂ ಈ ಏರ್ಪೋರ್ಟ್ ನಿಂದ ಅನುಕೂಲವಾಗಲಿದೆ ಎಂದರು.

ಯಡಿಯೂರಪ್ಪ ಅವರು ಚುನಾವಣಾ ರಾಜಕಾರಣದಿಂದ ಹಿಂದೆ ಸರಿಯುವುದಾಗಿ ಘೋಷಿಸಿದ್ದಾರೆ, ರಾಜಕೀಯದಿಂದಲ್ಲ.ಜೊತೆಗೆ ಅವರು ಪ್ರತಿನಿಧಿಸುತಿದ್ದ ಶಿಕಾರಿಪುರ ಕ್ಷೇತ್ರಕ್ಕೆ ನನ್ನನ್ನು ಅಭ್ಯರ್ಥಿ ಎಂದು ಘೋಷಣೆ ಮಾಡಿದ್ದಾರೆ. ವಿಪಕ್ಷಗಳ ಶಾಸಕರು ಕೂಡ ಅನುದಾನ ಕೊಟ್ಟ ಬಗ್ಗೆ ಹೇಳಿಕೊಂಡಿದ್ದಾರೆ. ಪಕ್ಷ ಅಧಿಕಾರಕ್ಕೆ ತರಲು ನಿರಂತರ ಓಡಾಟ ಮಾಡುತ್ತಾರೆ. ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರುತ್ತದೆ ಎಂದರು.

ರಾಜ್ಯದಲ್ಲಿ ಯುವ ಸಮಾವೇಶಗಳನ್ನು ಮಾಡುತ್ತಿದ್ದೇವೆ.ಹಾಸನ ಜೆಡಿಎಸ್ ನಲ್ಲಿ ಗೊಂದಲ ಇದೆ ಹೊರತು ಬಿಜೆಪಿಯಲ್ಲಿ ಇಲ್ಲ.ಯಾರೇ ಅಭ್ಯರ್ಥಿಯಾದ್ರೂ ಪ್ರೀತಂ ಗೌಡ ಅವರು ಗೆಲ್ಲುತ್ತಾರೆ. ಹಾಸನದ ಮತದಾರರು ಈಗಾಗಲೇ ನಿರ್ಧಾರ ಮಾಡಿದ್ದಾರೆ ಎಂದು ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next