Advertisement

ಯಡಿಯೂರಪ್ಪ , ವಿಜಯೇಂದ್ರ ಆಪ್ತರಿಗೇ ನಿಗಮ, ಮಂಡಳಿ ಮಣೆ

01:16 AM Nov 25, 2020 | mahesh |

ಬೆಂಗಳೂರು: ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಕಸರತ್ತಿನ ನಡುವೆಯೇ 14 ನಿಗಮ- ಮಂಡಳಿಗಳಿಗೆ ಅಧ್ಯಕ್ಷರ ನೇಮಕ ಮಾಡಲಾಗಿದ್ದು, ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಆಪ್ತರಿಗೆ ಸ್ಥಾನ ಕಲ್ಪಿಸಲಾಗಿದೆ.

Advertisement

ಪಕ್ಷದ ರಾಷ್ಟ್ರೀಯ ಸಂಘಟನ ಪ್ರಧಾನ ಕಾರ್ಯದರ್ಶಿ ಬಿ.ಎಲ್‌. ಸಂತೋಷ್‌ ಮತ್ತು ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು ಸೋಮವಾರ ಸಿಎಂ ಯಡಿಯೂರಪ್ಪ ಅವರ ಜತೆ ಚರ್ಚಿಸಿದ ಅನಂತರ ನಿಗಮ-ಮಂಡಳಿಗಳ ನೇಮಕ ಆದೇಶ ಹೊರಬಿದ್ದಿರುವುದು ಕುತೂಹಲ ಮೂಡಿಸಿದೆ.

ಸಚಿವ ಸ್ಥಾನದ ಆಕಾಂಕ್ಷಿ, ಬಿಎಸ್‌ವೈ ಆಪ್ತ ವಲಯದ ಶಾಸಕ ಎಸ್‌.ಆರ್‌. ವಿಶ್ವನಾಥ್‌ಗೆ ಬಿಡಿಎ ಅಧ್ಯಕ್ಷಗಿರಿ, ಪರಿಷತ್‌ ಸ್ಥಾನದ ಆಕಾಂಕ್ಷಿಯಾಗಿದ್ದ ಬಿ.ಎಸ್‌. ಪರಮಶಿವಯ್ಯ ಅವರಿಗೆ ಕರ್ನಾಟಕ ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನ ನೀಡಲಾಗಿದೆ. ಇನ್ನುಳಿದವರೂ ಸಿಎಂ ಮತ್ತು ವಿಜಯೇಂದ್ರ ಅವರಿಗೆ ಆಪ್ತರೇ ಆಗಿದ್ದಾರೆ.

ತರಾತುರಿಯಲ್ಲಿ ನೇಮಕ
ಪಕ್ಷದ ಮೂಲಗಳ ಪ್ರಕಾರ ಸಂಪುಟ ವಿಸ್ತರಣೆ ಅಥವಾ ಪುನಾರಚನೆಗೆ ಮುನ್ನ ನಿಗಮ, ಮಂಡಳಿಗಳಿಗೆ ನೇಮಕ ಮಾಡಬೇಕು ಎಂಬುದು ಚರ್ಚೆಯಾಗಿತ್ತು. ಗ್ರಾಮ ಪಂಚಾಯತ್‌ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ನಿಷ್ಠಾವಂತ ಕಾರ್ಯಕರ್ತರನ್ನು ಗುರುತಿಸಿ ಅವಕಾಶ ಕೊಡಬೇಕು ಎಂಬ ತೀರ್ಮಾನವಾಗಿತ್ತು. ಅದರಂತೆ ನೇಮಕ ಮಾಡಲಾಗಿದೆ ಎಂದು ಹೇಳಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next