Advertisement

ಶೃಂಗೇರಿಗೆ ಇಂದು ಯಡಿಯೂರಪ್ಪ ಭೇಟಿ

10:46 PM Sep 11, 2019 | Team Udayavani |

ಚಿಕ್ಕಮಗಳೂರು: ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಗುರುವಾರ ಶೃಂಗೇರಿಗೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 9.20ಕ್ಕೆ ಶೃಂಗೇರಿ ತಾಲೂಕಿನ ಮೆಣಸೆ ಗ್ರಾಮದ ಹೆಲಿಪ್ಯಾಡ್‌ಗೆ ಆಗಮಿಸಿ, ಅಲ್ಲಿಂದ ಶೃಂಗೇರಿ ಶಾರದಾಂಬಾ ದೇವಾಲಯಕ್ಕೆ ಭೇಟಿ ನೀಡುವರು.

Advertisement

ಬಳಿಕ, ಬೆಳಗ್ಗೆ 11.30ಕ್ಕೆ ಕೊಪ್ಪ ತಾಲೂಕು ಗೌರಿಗದ್ದೆ ಗ್ರಾಮಕ್ಕೆ ತೆರಳುವರು. ಅಲ್ಲಿಂದ ಪುನ: ಮೆಣಸೆ ಹೆಲಿಪ್ಯಾಡ್‌ಗೆ ಬಂದು ಹೆಲಿಕಾಪ್ಟರ್‌ ಮೂಲಕ ಬೆಂಗಳೂರಿಗೆ ವಾಪಸ್‌ ತೆರಳುವರು ಎಂದು ಮುಖ್ಯಮಂತ್ರಿ ಯವರ ವಿಶೇಷ ಕರ್ತವ್ಯಾ ಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next