Advertisement

ಬಿಜೆಪಿ ಸಿಎಂ ಅಭ್ಯರ್ಥಿ BSY; ಶಾ ಮತ್ತೆ ಘೋಷಣೆ, ಈಶ್ವರಪ್ಪಗೆ ಮುಖಭಂಗ

06:15 PM May 26, 2017 | Sharanya Alva |

ಬೆಂಗಳೂರು: ಕರ್ನಾಟಕದ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಎಸ್ ಯಡಿಯೂರಪ್ಪನವರೇ ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಶುಕ್ರವಾರ ಮತ್ತೊಮ್ಮೆ ಘೋಷಣೆ ಮಾಡುವ ಮೂಲಕ ಹಿರಿಯ ಮುಖಂಡ ಕೆಎಸ್ ಈಶ್ವರಪ್ಪ ಮತ್ತು ವಿರೋಧಿ ಪಾಳಯಕ್ಕೆ ಭಾರೀ ಮುಖಭಂಗವಾದಂತಾಗಿದೆ.

Advertisement

ರಾಯಣ್ಣ ಬ್ರಿಗೇಡ್ ನಿಂದಾಗಿ ಕೆಎಸ್ ಈಶ್ವರಪ್ಪ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ನಡುವೆ ಶೀತಲ ಸಮರ ನಡೆಯುತ್ತಿದ್ದು, ಬಿಜೆಪಿ ಹೈಕಮಾಂಡ್ ನ ಮಧ್ಯಪ್ರವೇಶದಿಂದಾಗಿ ಇಬ್ಬರ ನಡುವಿನ ಮುನಿಸು ತಣ್ಣಗಾಗಿತ್ತು. ಅಲ್ಲದೇ ಬ್ರಿಗೇಡ್ ಚಟುವಟಿಕೆಯಲ್ಲಿ ತೊಡಗಿಕೊಳ್ಳಬಾರದು ಎಂದು ಈಶ್ವರಪ್ಪಗೆ ತಾಕೀತು ಮಾಡಿತ್ತು. ಆದರೆ ಆರ್ ಎಸ್ ಎಸ್ ನ ಸಂತೋಷ್ ಹಾಗೂ ಬಿಜೆಪಿ ಪಕ್ಷದೊಳಗೆ ಅಸಮಾಧಾನದ ಹೊಗೆ ಮುಂದುವರಿದಿತ್ತು.

ಈ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಬಿಎಸ್ ಯಡಿಯೂರಪ್ಪನವರೇ ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ. ಹಾಗಾಗಿ ಸಿಎಂ ಅಭ್ಯರ್ಥಿ ವಿಷಯದಲ್ಲಿ ಯಾವುದೇ ಗೊಂದಲ ಇಲ್ಲ ಎಂಬ ಸ್ಪಷ್ಟ ಸಂದೇಶವನ್ನು ರವಾನಿಸಿದ್ದಾರೆ. ಪಿಟಿಐ ನಡೆಸಿದ ಸಂವಾದದ ವೇಳೆಯಲ್ಲಿ ಕರ್ನಾಟಕದ ಕುರಿತು ಕೇಳಿದ ಪ್ರಶ್ನೆಗೆ ಅಮಿತ್ ಶಾ ಈ ಪ್ರತಿಕ್ರಿಯೆ ನೀಡಿದ್ದಾರೆ ಎಂದು ಮಾಧ್ಯಮದ ವರದಿ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next