Advertisement

ಯಡಿಯೂರಪ್ಪ ಆಪ್ತ ಬಿ.ಜೆ.ಪುಟ್ಟಸ್ವಾಮಿ ಬಿಜೆಪಿಗೆ ಗುಡ್‌ ಬೈ ಹೇಳ್ತಾರಾ?

11:19 AM Jun 01, 2018 | |

ಬೆಂಗಳರೂರು:ವಿಧಾನಪರಿಷತ್‌ ಸ್ಥಾನ ಕೈ ತಪ್ಪಿದ ಹಿನ್ನಲೆಯಲ್ಲಿ ತೀವ್ರ ಅಸಮಾಧಾನ ಹೊಂದಿರುವ ಮಾಜಿ ಸಚಿವ ಬಿ.ಜೆ.ಪುಟ್ಟಸ್ವಾಮಿ ಅವರು ಬಿಜೆಪಿಗೆ ಗುಡ್‌ ಬೈ ಹೇಳುವ ಎಲ್ಲಾ ಸಾಧ್ಯತೆಗಳಿವೆ. 

Advertisement

ಹಿಂದುಳಿದ ವರ್ಗದ ನಾಯಕರಾಗಿದ್ದ  ಪುಟ್ಟಸ್ವಾಮಿ ಅವರು ಯಡಿಯೂರಪ್ಪ ಅವರ ಸರ್ಕಾರವಿದ್ದ ಅವಧಿಯಲ್ಲಿ ಕಾಂಗ್ರೆಸ್‌ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದರು. ಹಲವು ವಿಚಾರದಲ್ಲಿ ಯಡಿಯೂರಪ್ಪ ಪರ ಮಾತನಾಡಿದ್ದರು. 

ವಿಧಾನಪರಿಷತ್‌ ಸದಸ್ಯತ್ವಕ್ಕೆ ತಮ್ಮನ್ನು ಪರಿಗಣಿಸದೆ ಕೆ.ಪಿ.ನಂಜುಂಡಿ ಅವರಿಗೆ ಸ್ಥಾನ ಕಲ್ಪಿಸಿರುವ ಬಗ್ಗೆ  ಬಹಿರಂಗವಾಗಿ ತೀವ್ರ ಅಸಮಾಧಾನ ಹೊರಹಾಕಿದ್ದರು. ಬೆಂಬಲಿಗರ ಸಭೆ ಕರೆದು ಬಿಜೆಪಿ ತೊರೆಯುವ ಬಗ್ಗೆ ಚರ್ಚೆ ನಡೆಸಿದ್ದರು. 

ಶುಕ್ರವಾರ ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ವರದಿಯಾಗಿದೆ. 

Advertisement

Udayavani is now on Telegram. Click here to join our channel and stay updated with the latest news.

Next