Advertisement

ಯಡಿಯೂರಪ್ಪ ಆಪ್ತ ಸಂತೋಷ್‌ಗೆ ಜಾಮೀನು

11:48 AM Aug 06, 2017 | Team Udayavani |

ಬೆಂಗಳೂರು: ವಿಧಾನ ಪರಿಷತ್‌ ಪ್ರತಿಪಕ್ಷ ನಾಯಕ ಕೆ.ಎಸ್‌.ಈಶ್ವರಪ್ಪ ಅವರ ಆಪ್ತ ಸಹಾಯಕ ವಿನಯ್‌ ಮೇಲಿನ ಹಲ್ಲೆ ಮತ್ತು ಅಪಹರಣ ಯತ್ನ ಪ್ರಕರಣದಲ್ಲಿ  ಬಂಧನ ಭೀತಿ ಎದುರಿಸುತ್ತಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪನವರ ಆಪ್ತ ಸಹಾಯಕ ಎನ್‌. ಆರ್‌.ಸಂತೋಷ್‌ಗೆ ಶನಿವಾರ ನಗರದ 62ನೇ ಸೆಷನ್ಸ್‌ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮುಂಜೂರು ಮಾಡಿದೆ.

Advertisement

ಸಂತೋಷ್‌ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ಮಾನ್ಯ ಮಾಡಿರುವ ನ್ಯಾಯಾಧೀಶರಾದ ಎಸ್‌.ಎ ಚಿಕ್ಕೋರ್ಡೆ, ಅರ್ಜಿದಾರ ಸಂತೋಷ್‌ ಮುಂದಿನ ಒಂದು ತಿಂಗಳೊಳಗೆ ಪ್ರಕರಣದ ತನಿಖಾಧಿಕಾರಿ ಮುಂದೆ ವಿಚಾರಣೆಗೆ ಹಾಜರಾಗಬೇಕು. ಸಾಕ್ಷ್ಯಾನಾಶಕ್ಕೆ ಯತ್ನಿಸಬಾರದು,ಆತ ವಾಸಿಸುವ ಸರಿಯಾದ ವಿಳಾಸ ಕೊಟ್ಟು ತನಿಖಾಧಿಕಾರಿ ಕರೆದಾಗ ವಿಚಾರಣೆಗೆ ಸಹಕರಿಸಬೇಕು, ಬೆಂಗಳೂರು ಬಿಟ್ಟು ತೆರಳಬಾರದು ಎಂಬಿತ್ಯಾದಿ ಷರತ್ತುಗಳನ್ನು ವಿಧಿಸಿ ಜಾಮೀನು ಮಂಜೂರು ಮಾಡಿದರು.

ವಿನಯ್‌ ಮೇಲಿನ ಹಲ್ಲೆ ಮತ್ತು ಅಪಹರಣ ಪ್ರಕರಣದಲ್ಲಿ ಬಂಧನವಾಗಿದ್ದ ಆರೋಪಿಗಳಾದ ಪ್ರಶಾಂತ್‌ ಹಾಗೂ ರಾಜೇಂದ್ರ ಅರಸ್‌, ಇಡೀ ಪ್ರಕರಣದ ಸೂತ್ರಧಾರ ಎನ್‌.ಆರ್‌.ಸಂತೋಷ್‌ ಎಂದು ತನಿಖಾಧಿಕಾರಿಗಳ ಮುಂದೆ ಬಾಯ್ಬಿಟ್ಟಿದ್ದರು. ಈ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಸಂತೋಷ್‌ಗೆ ನೋಟೀಸ್‌ ಜಾರಿಗೊಳಿಸಿದ್ದರಿಂದ ಬಂಧನ ಭೀತಿಯಿಂದ ತಲೆಮರೆಸಿಕೊಂಡಿದ್ದರು. 

Advertisement

Udayavani is now on Telegram. Click here to join our channel and stay updated with the latest news.

Next