Advertisement

ಬ್ಯಾಂಕಿನಿಂದ 3.76 ಕೆಜಿ ಚಿನ್ನ ಕದ್ದ ಅಂತರಾಜ್ಯ ಕಳ್ಳರ ಬಂಧನ

05:23 PM Oct 08, 2020 | sudhir |

ಯಲಬುರ್ಗಾ : ತಾಲೂಕಿನ ಬೇವೂರಿನಲ್ಲಿರುವ ಕರ್ನಾಟಕ ಗ್ರಾಮೀಣ ಅಭಿವೃದ್ದಿ ಬ್ಯಾಂಕ್ ಗೆ ಕನ್ನ ಹಾಕಿ ಕಳ್ಳತನ ಮಾಡಿದ್ದ ಕಳ್ಳರನ್ನು ಪತ್ತೆ ಹಚ್ಚುವಲ್ಲಿ ಪೋಲಿಸರು ಯಶಸ್ವಿಯಾಗಿದ್ದಾರೆ.

Advertisement

ಕೊಪ್ಪಳ ಜಿಲ್ಲೆಯಲ್ಲಿ ಇದುವರೆಗೂ ನಡೆದ ದೊಡ್ಡ ದರೋಡೆ ಎಂಬ ಕುಖ್ಯಾತಿ ಹೊಂದಿತ್ತು.

ಸೆ. 23ರಂದು ಬೇವೂರಿನ ಗ್ರಾಮೀಣ ಬ್ಯಾಂಕ್‌ಗೆ ಕನ್ನ ಹಾಕಿದ್ದ ಖದೀಮರು, 3.76 ಕೆಜಿ ಬಂಗಾರ, 21.75 ಲಕ್ಷ ರೂಪಾಯಿ ನಗದು ದೋಚಿ ಪರಾರಿಯಾಗಿದ್ದರು. ಆರೋಪಿಗಳ ಪತ್ತೆಗೆ 4 ವಿಶೇಷ ತನಿಖಾ ತಂಡ ರಚಿಸಿದ್ದ ಎಸ್ಪಿ ಜಿ.ಸಂಗೀತಾ ಅವರು ದರೋಡೆಕೋರರ ಪತ್ತೆಗೆ ಜಾಲ ಬೀಸಿದ್ದರು.

ಮಹಾರಾಷ್ಟ್ರ ಮೂಲದ ದರೋಡೆಕೋರರು ಪೊಲೀಸ್ ಬಲೆಗೆ ಬಿದ್ದಿದ್ದು, ನಗದು ಹಾಗೂ ಬಂಗಾರ ವಶಪಡಿಸಿಕೊಳ್ಳಲಾಗಿದೆ.
ಘಟನಾ ಸ್ಥಳಕ್ಕೆ ಪೋಲಿಸರು ಕಳ್ಳರನ್ನು ಕರೆತಂದು ತನಿಖೆ ನಡೆಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next