Advertisement

ಯಳಂದೂರು: ಬಸ್‍ಗೆ ಬೈಕ್ ಢಿಕ್ಕಿ: ಮೂವರು ಗಂಭೀರ

12:10 PM Apr 12, 2022 | Team Udayavani |

ಯಳಂದೂರು: ಕೆಎಸ್‍ಆರ್‍ ಟಿಸಿ ಬಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ, ಮೂವರು ತೀವ್ರವಾಗಿ ಗಾಯಗೊಂಡಿರುವ ಘಟನೆ ಮಂಗಳವಾರ ತಾಲ್ಲೂಕಿನ ಯರಿಯೂರು ಗ್ರಾಮದ ರಾಷ್ಟ್ರೀಯ ಹೆದ್ದಾರಿ 209ರಲ್ಲಿ ನಡೆದಿದೆ.

Advertisement

ಈ ಅಪಘಾತದಲ್ಲಿ ಯರಿಯೂರು ಗ್ರಾಮದ ಪ್ರಜ್ವಲ್ (18) ಮದನ್, ಸಂಜಯ್ ಎಂಬವರಿಗೆ ಗಂಭೀರ ಗಾಯವಾಗಿದೆ.

ಗಾಯಾಳುಗಳನ್ನು ಯಳಂದೂರು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆಯನ್ನು ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಚಾಮರಾಜನಗರ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಇದನ್ನೂ ಓದಿ:ಶಾಲೆಗಳಿಗೆ ಹುಸಿ ಬಾಂಬ್‌ ಬೆದರಿಕೆ: ಗೂಗಲ್‌ ಸಂಸ್ಥೆಗೆ ಪತ್ರ

ಯಳಂದೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್‍ಆರ್‍ ಟಿಸಿ ಬಸ್ ಗೆ ಎದುರಿನಿಂದ ಬಂದ ಬೈಕ್ ಡಿಕ್ಕಿ ಹೊಡೆದಿದೆ.

Advertisement

ಯಳಂದೂರು ಠಾಣಾ ಪೊಲೀಸರು, ಪ್ರಕರಣ ದಾಖಲಿಸಿ,, ಬೈಕ್ ಹಾಗೂ ಬಸ್ಸನ್ನು ವಶಪಡಿಸಿಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next