Advertisement

Yelandur: ಚಾಲಕನ ನಿಯಂತ್ರಣ ತಪ್ಪಿದ ಬಸ್; 40ಕ್ಕೂ ಹೆಚ್ಚು ಮಂದಿಗೆ ಗಾಯ

04:14 PM Jun 01, 2024 | Team Udayavani |

ಯಳಂದೂರು: ಖಾಸಗಿ ಬಸ್ ಗೆ ಅಪಘಾತವಾಗಿದ್ದು, 40ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ತಾಲೂಕಿನ ಬಿಳಿಗಿರಿರಂಗನ ಬೆಟ್ಟದಲ್ಲಿ ಜೂ.1ರ ಶನಿವಾರ ನಡೆದಿದೆ.

Advertisement

ನಂಜನಗೂಡು ತಾಲೂಕಿನ ವಿವಿಧ ಗ್ರಾಮಗಳಿಂದ ದೇವರ ದರ್ಶನಕ್ಕೆ ಭಕ್ತರು ಹೋಗಿ ದರ್ಶನ ಮುಗಿಸಿಕೊಂಡು ಯಳಂದೂರು ಮಾರ್ಗವಾಗಿ ಬರುತ್ತಿದ್ದ ವೇಳೆ ಬಿಳಿಗಿರಿರಂಗನ ಬೆಟ್ಟದ ಗವಿ ಬೋರೆ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಬಸ್ ಅಪಘಾತವಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಪಾಯವಾಗಿಲ್ಲ.

ಈ ಘಟನೆಯಲ್ಲಿ 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಇವರನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಹಾಗೂ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.

ಈ ಬಗ್ಗೆ ಯಳಂದೂರು ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next