Advertisement

Yelandur ; ರಸ್ತೆ ಅಪಘಾತದಲ್ಲಿ ಮೆಡಿಕಲ್ ವಿದ್ಯಾರ್ಥಿ ಮೃತ್ಯು,ಮೂವರಿಗೆ ಗಾಯ

09:56 PM Sep 30, 2023 | Team Udayavani |

ಯಳಂದೂರು: ತಾಲೂಕಿನ ಬಿಳಿಗಿರಿರಂಗನ ಬೆಟ್ಟದ ಕೆ.ಗುಡಿಗೆ ತೆರಳುವ ರಸ್ತೆಯಲ್ಲಿ ಶನಿವಾರ ಸಂಜೆ ನಡೆದ ರಸ್ತೆ ಅಪಘಾತದಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟು ಮೂವರು ಗಾಯಗೊಂಡಿರುವ ಘಟನೆ ಜರುಗಿದೆ.

Advertisement

ಮೃತ ಯುವಕ ಕೊಳ್ಳೇಗಾಲದ ಬಸ್ತಿಪುರ ನಿವಾಸಿ ಸೃಜನ್(22) ಎಂದು ಗುರುತಿಸಲಾಗಿದೆ. ಸೃಜನ್ ಹಾಗೂ ಈತನ ಐದು ಜನ ಸ್ನೇಹಿತರು ಬೆಂಗಳೂರು ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳಾಗಿದ್ದರು ಎನ್ನಲಾಗಿದೆ. ಶವರ್ಲೆಟ್ ವಾಹನದಲ್ಲಿ ಪ್ರವಾಸಕ್ಕೆ ತೆರಳಿ ಚಾಮರಾಜನಗರಕ್ಕೆ ಕೆ.ಗುಡಿ ಮಾರ್ಗವಾಗಿ ತೆರಳುತ್ತಿದ್ದ ವೇಳೆ ತಿರುವಿನಲ್ಲಿ ಇವರ ವಾಹನ ತಡೆಗೋಡೆಗೆ ಬಡಿದು ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

ವಾಹನದಲ್ಲಿದ್ದ ದರ್ಶನ್, ಮಹೇಶ್, ಶಶಾಂಕ್ ಎಂಬುವರಿಗೆ ಗಾಯಗಳಾಗಿದ್ದು ಇವರಿಗೆ ಬಿಳಿಗಿರಿರಂಗನ ಬೆಟ್ಟದ ವಿವೇಕಾನಂದ ಗಿರಿಜನ ಕಲ್ಯಾಣ ಕೇಂದ್ರದ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆಯನ್ನು ನೀಡಿ ಚಾಮರಾಜನಗರ ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಗಿದೆ. ಮತ್ತೊಬ್ಬ ಸುದೀಪ್ ಶ್ರೀನಿವಾಸ್ ಎಂಬವರಿಗೆ ಯಾವುದೇ ಗಾಯಗಳಾಗಿಲ್ಲ. ಈ ಸಂಬಂಧ ಯಳಂದೂರು ಪಟ್ಟಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next