Advertisement

ಎಳ್ಳಮಾವಾಸ್ಯೆ: ಮಟ್ಟು ಕಡಲಲ್ಲಿ ಸಾವಿರಾರು ಭಕ್ತಾದಿಗಳಿಂದ ಪುಣ್ಯಸ್ನಾನ

01:11 PM Jan 02, 2022 | Team Udayavani |

ಕಟಪಾಡಿ: ಎಳ್ಳಮಾವಾಸ್ಯೆ ಪ್ರಯುಕ್ತ ಮಟ್ಟು ಕಡಲಲ್ಲಿ ಸಾವಿರಾರು ಸಂಖ್ಯೆಯಲ್ಲಿ ಭಕ್ತಾಧಿಗಳು ಸಮುದ್ರ ಸ್ನಾನ ಪೂರೈಸಿ ಪುಳಕಿತಗೊಂಡರು.

Advertisement

ಅಬಾಲ ವೃದ್ಧರಾದಿಯಾಗಿ ಭಕ್ತಾದಿಗಳು ಸಂಭ್ರಮದಿಂದ ಪಾಲ್ಗೊಂಡಿರುವುದು ಕಂಡು ಬಂತು. ಕೆಲವೆಡೆ ಗತಿಸಿದ ಹಿರಿಯರಿಗೆ ಪೂಜೆ ಸಲ್ಲಿಸುತ್ತಿರುವುದು ಕಂಡು ಬಂತು.

ಎಳ್ಳಮಾವಾಸ್ಯೆಯ ಪ್ರಯುಕ್ತ ಪಲಿಮಾರು ಉಭಯ ಮಠಾಧೀಶರಾದ  ಶ್ರೀ ವಿಧ್ಯಾಧೀಶ ಸ್ವಾಮೀಜಿ ಹಾಗೂ ಅವರ ಶಿಷ್ಯರಾದ ಶ್ರೀ ವಿದ್ಯಾರಾಜೇಶ್ವರ ತೀರ್ಥ ಸ್ವಾಮೀಜಿಯವರು ಹಾಗೂ ಕಾಣಿಯೂರು ಮಠಾಧೀಶರಾದ  ಶ್ರೀ ವಿದ್ಯಾವಲ್ಲಭ ತೀರ್ಥ ಸ್ವಾಮೀಜಿಯವರು ಹಾಗೂ ಸೋದೆ ಮಠಾಧೀಶರಾದ ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದರು, ಮಟ್ಟು ಕಡಲ ಕಿನಾರೆಯಲ್ಲಿ ಸಮುದ್ರ ಸ್ನಾನ ಪೂರೈಸಿದರು.

Advertisement

Udayavani is now on Telegram. Click here to join our channel and stay updated with the latest news.

Next