Advertisement

ಯಲ್ಲಾಪುರ : ಭೀಕರ ಅಪಘಾತದಲ್ಲಿ ಮಗು ಸೇರಿ ಮೂವರ ಬಲಿ 

10:37 AM Jun 26, 2018 | Team Udayavani |

ಯಲ್ಲಾಪುರ: ತಾಲೂಕಿನ ಚಿಕ್ಕಮಾವಳ್ಳಿ ಬಳಿ ಮಂಗಳವಾರ ಬೆಳಗ್ಗೆ  ಕಾರೊಂದಕ್ಕೆ ಲಾರಿ ಢಿಕ್ಕಿಯಾಗಿ 3 ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿರುವ ಭೀಕರ ಅವಘಡ ಸಂಭವಿಸಿದೆ. 

Advertisement

ಶಿರಸಿಯಿಂದ ಹುಬ್ಬಳ್ಳಿ ಕಡೆಗೆ ತೆರಳುತ್ತಿದ್ದ ಕಾರಿಗೆ ಲಾರಿ ಮುಖಾಮುಖಿ ಢಿಕ್ಕಿಯಾಗಿ ಅವಘಡ ಸಂಭವಿಸಿದೆ. 

ಮೃತ ದುರ್ದೈವಿಗಳು  40 ವರ್ಷ ಪ್ರಾಯದ ವಿನಾಯಕ ಹೆಗಡೆ, ಅರ್ಚನಾ ಹೆಗಡೆ (35) ಮತ್ತು 3 ವರ್ಷದ ಮಗು ಶ್ರಾವಣಿ ಎಂದು ತಿಳಿದು ಬಂದಿದೆ. 

ಕಾರಿನಲ್ಲಿದ್ದ ಇನ್ನೊಂದು ಮಗು ಯಶಸ್ವಿನಿಗೆ ಗಾಯವಾಗಿದ್ದು ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಯಾಗಿದೆ. 

ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Advertisement

ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ. 

Advertisement

Udayavani is now on Telegram. Click here to join our channel and stay updated with the latest news.

Next