Advertisement

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಬಿರುಸಿನ ಮಳೆ; ಇಂದು ಎಲ್ಲೋ ಅಲರ್ಟ್‌ ಘೋಷಣೆ

10:43 PM May 13, 2023 | Team Udayavani |

ಮಂಗಳೂರು : ಕರಾವಳಿ ಭಾಗದ ಹಲವು ಕಡೆಗಳಲ್ಲಿ ಶನಿವಾರ ಮಳೆಯಾದ ವರದಿಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಬೆಳಗ್ಗಿನಿಂದಲೇ ಉತ್ತಮ ಮಳೆಯಾಗಿದ್ದು ಕೆಲವು ಕಡೆಗಳಲ್ಲಿ ಹಾನಿ ಸಂಭವಿಸಿದೆ.

Advertisement

ಮಂಗಳೂರು ನಗರದಲ್ಲಿ ಬೆಳಗ್ಗೆ ಸುಮಾರು ಎರಡು ತಾಸುಗಳ ಕಾಲ ನಿರಂತರ ಮಳೆಯಾಗಿತ್ತು. ಬಳಿಕ ಮೋಡ ಕವಿದ ವಾತಾವರಣ, ಸಾಧಾರಣ ಮಳೆ ಸುರಿದಿದೆ. ತಗ್ಗು ಪ್ರದೇಶಗಳಲ್ಲಿ, ರಸ್ತೆಗಳಲ್ಲಿ ನೀರು ನಿಂತು ಸಂಚಾರಕ್ಕೆ ತೊಂದರೆ ಉಂಟಾಯಿತು. ಉಳಿದಂತೆ ಬಂಟ್ವಾಳ, ಬೆಳ್ತಂಗಡಿ ತಾಲೂಕು ಸೇರಿದಂತೆ ಜಿಲ್ಲೆಯಾದ್ಯಂತ ಉತ್ತಮ ಮಳೆ ಸುರಿದಿತ್ತು.

ಇಂದು ಮಳೆ ಸಾಧ್ಯತೆ
ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯಂತೆ ಮೇ 14ರಂದು ಕರಾವಳಿ ಭಾಗದಲ್ಲಿ ಎಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಈ ವೇಳೆ ಬಿರುಸಿನ ಮಳೆ ಸುರಿಯಲಿದ್ದು, ಗಾಳಿಯ ವೇಗ, ಸಮುದ್ರದ ಅಬ್ಬರ ಕೂಡ ಇರುವ ಸಾಧ್ಯತೆ ಇದೆ. ಮಂಗಳೂರಿನಲ್ಲಿ ಶನಿವಾರ 30.8 ಡಿ.ಸೆ. ಗರಿಷ್ಠ ಮತ್ತು 24.8 ಡಿ.ಸೆ. ಕನಿಷ್ಠ ತಾಪಾಮಾನ ದಾಖಲಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next