Advertisement

ಇಂದಿನಿಂದ “ಎಲ್ಲೋ ಅಲರ್ಟ್‌’; ಕರಾವಳಿಯಲ್ಲಿ ತುಸು ಬಿಡುವು ನೀಡಿದ ಮಳೆ

11:33 PM Jul 09, 2024 | Team Udayavani |

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವರುಣನ ಆರ್ಭಟ ತುಸು ಕಡಿಮೆಯಾಗಿದೆ. ಜಿಲ್ಲೆಯಾದ್ಯಂತ ಮಂಗಳವಾರ ಸಾಧಾರಣ ಮಳೆಯಾಗಿದೆ.

Advertisement

ಮಂಗಳೂರು ನಗರದಲ್ಲಿ ಬೆಳಗ್ಗೆಯಿಂದ ಸಂಜೆಯವರಗೆ ಮಳೆ ಬಿಡುವು ನೀಡಿತ್ತು. ಬಿಸಿಲು ಮತ್ತು ಮೋಡದ ವಾತಾವರಣ ಇತ್ತು. ಸಂಜೆ ವೇಳೆ ಬಿರುಸು ಮಳೆಯಾಗಿದ್ದು, ಬಳಿಕ ಮಳೆಯ ತೀವ್ರತೆ ಕಡಿಮೆಯಾಗಿತ್ತು.

ಜಿಲ್ಲೆಯ ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಸುಳ್ಯ, ಸುಬ್ರಹ್ಮಣ್ಯದಲ್ಲಿ ಸಂಜೆ ವೇಳೆ ಉತ್ತಮ ಮಳೆ ಯಾಗಿದೆ. ಹಗಲಿನ ವೇಳೆ ಕೆಲವೆಡೆ ಬಿಸಿಲಿನ ವಾತಾವರಣವಿತ್ತು. ಸೋಮವಾರ ನೆರೆ ಕಾಣಿಸಿದ್ದ ಪ್ರದೇಶದಲ್ಲಿ ನೀರು ಇಳಿಕೆಯಾಗಿದೆ.

ಕೊಡಗು ಮತ್ತು ಕಾಸರಗೋಡು ಜಿಲ್ಲೆಯಲ್ಲಿಯೂ ಮಳೆ ಪ್ರಮಾಣ ಸೋಮವಾರಕ್ಕಿಂತ ಇಂದು ಕಡಿಮೆ ಯಾಗಿತ್ತು.
ಸೋಮವಾರ ರಾತ್ರಿ ನಗರದಲ್ಲಿ ಸುರಿದ ಭಾರೀ ಮಳೆಯಿಂದ ಕುಲಶೇಖರದ ಸಿಲ್ವರ್‌ ಗೇಟ್‌ನ ವೀರನಾರಾಯಣ ಕಟ್ಟೆ ಮನೆಗೆ ಹಾನಿ ಉಂಟಾಗಿದೆ. ಶಾಸಕ ಡಿ. ವೇದವ್ಯಾಸ ಕಾಮತ್‌ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇಂದು “ಎಲ್ಲೋ ಅಲರ್ಟ್‌’
ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯ ಪ್ರಕಾರ ಜು.10 ರಿಂದ 13ರ ವರೆಗೆ ಕರಾವಳಿ ಭಾಗದಲ್ಲಿ “ಎಲ್ಲೋ ಅಲರ್ಟ್‌’ ಘೊಷಿಸಲಾಗಿದೆ. ಈ ವೇಳೆ ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ನಗರದಲ್ಲಿ ಮಂಗಳವಾರ 29.4 ಡಿ.ಸೆ. ಗರಿಷ್ಠ ತಾಪಮಾನ ದಾಖಲಾಗಿ ವಾಡಿಕೆಗಿಂತ 0.5 ಡಿ.ಸೆ. ಏರಿಕೆ ಕಂಡಿತ್ತು. 22.4 ಡಿ.ಸೆ. ಕನಿಷ್ಠ ತಾಪಮಾನ ದಾಖಲಾಗಿ ವಾಡಿಕೆಗಿಂತ 0.8 ಡಿ.ಸೆ. ಕಡಿಮೆ ಇತ್ತು.

Advertisement
Advertisement

Udayavani is now on Telegram. Click here to join our channel and stay updated with the latest news.

Next