Advertisement

ಭಾರೀ ಮಳೆ ಮುನ್ಸೂಚನೆ : ಕರಾವಳಿ ಭಾಗದಲ್ಲಿ ಎಲ್ಲೋ ಅಲರ್ಟ್‌

09:04 AM Sep 03, 2022 | Team Udayavani |

ಮಂಗಳೂರು/ಉಡುಪಿ : ಕಳೆದ ಕೆಲವು ದಿನಗಳಿಂದ ಬಿರುಸು ಪಡೆದ ಮಳೆ ಶುಕ್ರವಾರ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ತುಸು ಬಿಡುವು ನೀಡಿತ್ತು. ಮಂಗಳೂರು ನಗರದ ಸಹಿತ ಜಿಲ್ಲೆಯಲ್ಲಿ ಬಿಸಿಲು ಮತ್ತು ಮೋಡದಿಂದ ಕೂಡಿದ ವಾತಾವರಣ ಇತ್ತು. ಕೆಲವು ಕಡೆಗಳಲ್ಲಿ ಸಾಧಾರಣ ಮಳೆಯಾಗಿತ್ತು.

Advertisement

ಉಡುಪಿ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಮಳೆಯ ವಾತಾವರಣ ಮುಂದುವರಿದಿದ್ದು, ಗುರುವಾರ ತಡರಾತ್ರಿ, ಶುಕ್ರವಾರ ಸಂಜೆವೇಳೆ ಸಾಧಾರಣ ಮಳೆಯಾಗಿದ್ದು, ಕೆಲವೆಡೇ ಧಾರಾಕಾರ ಮಳೆ ಸುರಿದಿದೆ. ಕಾರ್ಕಳ, ಉಡುಪಿ, ಕುಂದಾಪುರ ಸುತ್ತಮುತ್ತ ಬಿಸಿಲು-ಮೋಡ ಕವಿದ ವಾತಾವರಣದ ನಡುವೆ ಸಣ್ಣದಾಗಿ ಮಳೆಯಾಗಿದೆ.

ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯಂತೆ ಶನಿವಾರ ಕರಾವಳಿ ಭಾಗದಲ್ಲಿ ಎಲ್ಲೋ ಅಲರ್ಟ್‌ ಘೋಷಿಸಲಾಗಿದ್ದು, ಉತ್ತಮ ಮಳೆಯಾಗುವ ನಿರೀಕ್ಷೆ ಇದೆ.

ಇದನ್ನೂ ಓದಿ : ದಕ್ಷಿಣ ಕನ್ನಡ, ಉಡುಪಿಯ ಮೂವರಿಗೆ ಉತ್ತಮ ರಾಜ್ಯ ಶಿಕ್ಷಕ ಪ್ರಶಸ್ತಿ

Advertisement

Udayavani is now on Telegram. Click here to join our channel and stay updated with the latest news.

Next