Advertisement

ಕರಾವಳಿ ಭಾಗದಲ್ಲಿ ಯಲ್ಲೋ ಅಲರ್ಟ್‌; ಮಳೆ ನಿರೀಕ್ಷೆ

01:32 AM Aug 01, 2022 | Team Udayavani |

ಮಂಗಳೂರು/ಉಡುಪಿ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಮಳೆ ಕ್ಷೀಣಿಸಿದೆ. ಮಂಗಳೂರು ನಗರದಲ್ಲಿ ಶನಿವಾರ ಮುಂಜಾನೆ ಅವಾಂತರ ಸೃಷ್ಟಿಸಿದ್ದ ಮಳೆ ರವಿವಾರ ದಿನಪೂರ್ತಿ ಬಿಡುವು ನೀಡಿತ್ತು.

Advertisement

ಜಿಲ್ಲೆಯ ಕೆಲವು ಕಡೆಗಳಲ್ಲಿ ಸಾಧಾರಣ ಮಳೆಯಾಗಿದ್ದು, ಬಿಸಿಲು ಮತ್ತು ಮೋಡದಿಂದ ಕೂಡಿದ ವಾತಾವರಣ ಇತ್ತು. ಉಡುಪಿ ಜಿಲ್ಲೆಯಲ್ಲಿ ದಿನಪೂರ್ತಿ ಬಿಸಿಲಿನ ವಾತಾವರಣವಿತ್ತು.

ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯಂತೆ ಆ. 1ರಿಂದ ಮೂರು ದಿನಗಳ ಕಾಲ ಕರಾವಳಿ ಭಾಗದಲ್ಲಿ ಎಲ್ಲೋ ಅಲರ್ಟ್‌ ಘೋಷಿಸಲಾಗಿದ್ದು, ಉತ್ತಮ ಮಳೆ ಸುರಿಯುವ ನಿರೀಕ್ಷೆ ಇದೆ.

ಸುಬ್ರಹ್ಮಣ್ಯ: ಭಾರೀ ಮಳೆ
ಸುಬ್ರಹ್ಮಣ್ಯ: ಸುಬ್ರಹ್ಮಣ್ಯ ಪರಿಸರದಲ್ಲಿ ರವಿವಾರ ಸಂಜೆ ಸುರಿದ ಭಾರೀ ಮಳೆಯಿಂದಾಗಿ ಸುಬ್ರಹ್ಮಣ್ಯ-ಕಡಬ ರಾಜ್ಯ ಹೆದ್ದಾರಿಯ ಕೈಕಂಬ ಬಳಿಯ ಕೋಟೆ ಹೊಳೆಯ ಸೇತುವೆ ಮುಳುಗಡೆಯಾಯಿತು. ಸ್ವಲ್ಪ ಸಮಯ ಸಂಚಾರಕ್ಕೆ ಅಡಚಣೆ ಉಂಟಾಯಿತು.

Advertisement

Udayavani is now on Telegram. Click here to join our channel and stay updated with the latest news.

Next