Advertisement

ಬಿರುಸಿನ ಮಳೆ : ಉಡುಪಿ ಜಿಲ್ಲೆಗಳಲ್ಲಿ ಇಂದು, ನಾಳೆ ಎಲ್ಲೋ ಅಲರ್ಟ್‌

08:55 AM Sep 11, 2022 | Team Udayavani |

ಮಂಗಳೂರು/ಉಡುಪಿ : ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಶುಕ್ರವಾರ ತಡರಾತ್ರಿ ಮತ್ತು ಶನಿವಾರ ಬಿಸಿಲು ಮತ್ತು ಮೋಡದಿಂದ ಕೂಡಿದ ವಾತಾವರಣ ಇದ್ದು, ಕೆಲವು ಕಡೆಗಳಲ್ಲಿ ಬಿಟ್ಟು ಬಿಟ್ಟು ಮಳೆಯಾಗಿದೆ.

Advertisement

ಮಂಗಳೂರು, ಪುತ್ತೂರು, ಸುಳ್ಯ, ಬಂಟ್ವಾಳ, ಬೆಳ್ತಂಗಡಿ, ಉಡುಪಿ, ಕುಂದಾಪುರ, ಕಾರ್ಕಳ, ಹೆಬ್ರಿ, ಕಾಪು, ಬೈಂದೂರು ಭಾಗದಲ್ಲಿ ಬಿಸಿಲು-ಮೋಡ ಕವಿದ ವಾತಾವರಣ ನಡುವೆ ಬಿಟ್ಟುಬಿಟ್ಟು ಮಳೆ ಸುರಿದಿದೆ. ಉಡುಪಿ, ಮಣಿಪಾಲ, ಪರ್ಕಳ, ಮಲ್ಪೆ ಭಾಗದಲ್ಲಿ ಶನಿವಾರ ಮುಂಜಾನೆ, ಸಂಜೆ ವೇಳೆ ಕೆಲಕಾಲ ಧಾರಾಕಾರ ಮಳೆಯಾಗಿದೆ.

ಭಾರತೀಯ ಹವಾಮಾನ ಇಲಾಖೆಯು ಸೆ. 11 ಮತ್ತು 12ರಂದು ಎಲ್ಲೋ ಅಲರ್ಟ್‌ ಘೋಷಿಸಿದೆ. ಈ ವೇಳೆ ಬಿರುಸಿನ ಮಳೆ, ಗಾಳಿ ಮತ್ತು ಸಮುದ್ರದ ಅಬ್ಬರ ಹೆಚ್ಚಿರುವ ನಿರೀಕ್ಷೆ ಇದೆ.

ಇದನ್ನೂ ಓದಿ : ತೆಲುಗು ಹಿರಿಯ ನಟ, ನಿರ್ಮಾಪಕ ʻಕೃಷ್ಣಂ ರಾಜುʼ ವಿಧಿವಶ

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next