Advertisement

Yermarus: ಖಾಸಗಿ ಬಸ್ ಹರಿದು 150 ಕುರಿಗಳ ಮಾರಣಹೋಮ

11:00 AM Sep 20, 2024 | Team Udayavani |

ರಾಯಚೂರು: ಸಮೀಪದ ಯರಮರಸ್ ಬೈಪಾಸ್ ನಲ್ಲಿ ಖಾಸಗಿ ಬಸ್ ಹರಿದು 150ಕ್ಕೂ ಹೆಚ್ಚು ಕುರಿಗಳ ಮಾರಣಹೋಮ ನಡೆದಿದ್ದು, ಅಂದಾಜು 15 ಲಕ್ಷ ಹಾನಿ ಸಂಭವಿಸಿದೆ.

Advertisement

ಗುರುವಾರ ಬೆಳಗಿನ ಜಾವ ತೆಲಂಗಾಣದ ನಾರಾಯಪೇಟೆ, ಹೊಳಪುರ ಮೂಲದ ಕುರಿಗಾಹಿಗಳು ಕುರಿ ಹೊಡೆದುಕೊಂಡು ಹೊಗುವಾಗ ವೇಗದಲ್ಲಿ ಬಂದ ಬಸ್ ಮೇಲೆ ಹರಿದಿದೆ. ಪರಿಣಾಮ 150ಕ್ಕೂ ಅಧಿಕ ಕುರಿಗಳು ಸ್ಥಳದಲ್ಲೇ ಅಪ್ಪಚ್ಚಿಯಾದರೆ 30 ಕ್ಕೂ ಹೆಚ್ಚು ಕುರಿಗಳು ಗಾಯಗೊಂಡಿವೆ. ಗಂಟೆ ಮಲ್ಲೇಶ, ಪೂಜಾರಿ ಚಿನ್ನಪ್ಪ, ಬಾಲರಾಜ್ ಎಂಬುವವರಿಗೆ ಸೇರಿದ ಕುರಿಗಳು ಸಾವನ್ನಪ್ಪಿವೆ. ಬಸ್ ಚಾಲಕನಿಗೆ ಬ್ಯಾಟರಿ ಹಾಕಿ ಎಚ್ಚರಿಸಿದರೂ ಗಮನಿಸಿಲ್ಲ. 500 ಕುರಿಗಳಿದ್ದು, ಉಳಿದು ಕುರಿಗಳು ಬೆದರಿ ರಸ್ತೆ ಪಕ್ಕಕ್ಕೆ ಸರಿದಿವೆ ಎಂದು ಕುರಿಗಾಹಿ ತಿಳಿಸಿದ್ದಾರೆ.

ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಖಾಸಗಿ ಬಸ್ ವಶಕ್ಕೆ ಪಡೆದಿದ್ದಾರೆ. ಸ್ಥಳೀಯ ಅಧಿಕಾರಿಗಳು, ಜನಪ್ರತಿನಿಧಿಗಳ ಸಹಕಾರದಲ್ಲಿ ಹೆದ್ದಾರಿ ಪಕ್ಕದಲ್ಲೇ ಜೆಸಿಬಿಯಿಂದ ಗುಂಡಿ ಅಗೆದು ಕುರಿಗಳನ್ನು ಮುಚ್ಚಿ ಹಾಕಲಾಗುತ್ತಿದೆ. ಸ್ಥಳಕ್ಕೆ ಸ್ಥಳೀಯ ಪಶು ಇಲಾಖೆ ಅಧಿಕಾರಿಗಳು, ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ನಾರಾಯಣ ಪೇಟೆ ಶಾಸಕ, ಅಲ್ಲಿನ ಪಶು ಅಧಿಕಾರಿಗಳು ಬಂದು ಮಾಹಿತಿ ಪಡೆದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next