Advertisement

ರಾಹುಲ್ ನಾಯಕ ಎಂದು ಒಪ್ಪಿಕೊಳ್ಳಲ್ಲ; ಮತ್ತೊಬ್ಬ ಕೈ ಶಾಸಕ ರಾಜೀನಾಮೆ

03:07 PM Mar 17, 2017 | Team Udayavani |

ನವದೆಹಲಿ:ಗೋವಾ ವಿಧಾನಸಭೆಯಲ್ಲಿ ಗುರುವಾರ ಸಿಎಂ ಮನೋಹರ್ ಪರ್ರಿಕರ್ ವಿಶ್ವಾಸಮತ ಯಾಚನೆಯಲ್ಲಿ ಗೆಲುವು ಸಾಧಿಸಿದ ಬೆನ್ನಲ್ಲೇ ಕಾಂಗ್ರೆಸ್ ಶಾಸಕ ವಿಶ್ವಜಿತ್ ರಾಣೆ ಪಕ್ಷಕ್ಕೆ ಗುಡ್ ಬೈ ಹೇಳಿದ್ದರು. ಶುಕ್ರವಾರ ಕಾಂಗ್ರೆಸ್ ಪಕ್ಷದ ಮತ್ತೊಬ್ಬ ಹಿರಿಯ ಶಾಸಕ ಸಾವಿಯೋ ರೋಡ್ರಿಗಸ್ ಕೂಡಾ ರಾಜೀನಾಮೆ ನೀಡಿದ್ದಾರೆ.

Advertisement

ನಾನು ರಾಹುಲ್ ಗಾಂಧಿಯನ್ನು ನಮ್ಮ ಮುಖಂಡ ಎಂದು ಒಪ್ಪಿಕೊಳ್ಳಲು ತಯಾರಿಲ್ಲ ಎಂದು ಹೇಳಿರುವುದಾಗಿ ಟೈಮ್ಸ್ ನೌ ವರದಿ ಮಾಡಿದೆ. ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಜವಾಬ್ದಾರಿ ತೆಗೆದುಕೊಳ್ಳುತ್ತಿಲ್ಲ. ಪಕ್ಷದ ಈ ನಷ್ಟಕ್ಕೆ ದಿಗ್ವಿಜಯ್ ಸಿಂಗ್ ಅವರನ್ನು ಹೊಣೆಗಾರರನ್ನಾಗಿಸಲಾಗಿದೆ ಎಂದು ರೋಡ್ರಿಗಸ್ ಅಸಮಾಧಾನ ವ್ಯಕ್ತಪಡಿಸಿರುವುದಾಗಿ ವರದಿ ತಿಳಿಸಿದೆ.

ನಿನ್ನೆ ಗೋವಾ ವಿಧಾನಸಭೆಯಲ್ಲಿ ನಡೆದ ವಿಶ್ವಾಸ ಮತ ಯಾಚನೆಯಲ್ಲಿ ಸರ್ಕಾರ ರಚಿಸುವಷ್ಟು ಬೇಕಾದ ಬಹುಮತ ಪಡೆಯುವಲ್ಲಿ ಕಾಂಗ್ರೆಸ್ ವಿಫಲವಾಗಿದೆ ಎಂದು ದೂರಿದರು. ವಿಶ್ವಾಸಮತ ಯಾಚನೆ ವೇಳೆ ಕಾಂಗ್ರೆಸ್ ಪಕ್ಷದ ಶಾಸಕ ರಾಣೆ ಗೈರು ಹಾಜರಾಗಿದ್ದು, ಬಳಿಕ ಕಾಂಗ್ರೆಸ್ ಗೆ ರಾಜೀನಾಮೆ ನೀಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next