Advertisement

ತುಮಕೂರು ‘ಕೈ’ ತಪ್ಪಿದ ಟಿಕೆಟ್: ಶಾಸಕ ಸುಧಾಕರ್ ಅಸಮಧಾನ

06:24 AM Mar 16, 2019 | Team Udayavani |

ಬೆಂಗಳೂರು: ರಾಜ್ಯದ ಮೈತ್ರಿ ಪಕ್ಷದಲ್ಲಿ ಲೋಕಸಭಾ ಚುಣಾವಣೆಯ ಟಿಕೆಟ್ ಗೊಂದಲ ಇನ್ನೂ ಬಗೆಹರಿದಿಲ್ಲ. ಈಗಾಗಲೇ ಟಿಕೆಟ್ ಕೈ ತಪ್ಪಿರುವುದರಿಂದ ಹಲವು ನಾಯಕರು ಗರಂ ಆಗಿದ್ದು ಈಗ ಚಿಕ್ಕಬಳ್ಳಾಪುರ ಶಾಸಕ ಸುಧಾಕರ್ ಕೂಡಾ ಬೇಸರ ವ್ಯಕ್ತಡಿಸಿದ್ದಾರೆ. 

Advertisement

ತುಮಕೂರು ಸಂಸದ ಮುದ್ದೆಹನುಮೇಗೌಡರಿಗೆ ಟಿಕೆಟ್ ದಕ್ಕದೇ ಇರುವುದು ಸುಧಾಕರ್ ಬೇಸರಕ್ಕೆ ಕಾರಣ. ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಒಟ್ಟಾಗಿ ಚುನಾವಣೆ ಎದುರಿಸುವುದರಿಂದ ಸೀಟು ಹಂಚಿಕೆ ವೇಳೆ ತುಮಕೂರು ಕ್ಷೇತ್ರ ಜೆಡಿಎಸ್ ಪಾಲಾಗಿತ್ತು.

ಸದ್ಯ ಕ್ಷೇತ್ರದಲ್ಲಿ ಕಾಂಗ್ರೆಸ್ ನ ಮುದ್ದೆಹನುಮೇಗೌಡ ಸಂಸದರಾಗಿರುವುದರಿಂದ ಜೆಡಿಎಸ್ ಗೆ ಕ್ಷೇತ್ರ ಬಿಟ್ಟುಕೊಡುವ ಬಗ್ಗೆ ಉಪ ಮುಖ್ಯಮಂತ್ರಿ ಪರಮೇಶ್ವರ್ ಸೇರಿ ಹಲವರು ಅಸಮಧಾನ ವ್ಯಕ್ತಪಡಿಸಿದ್ದರು. 

ಈ ಎಲ್ಲಾ ಬೆಳವಣಿಗೆಯ ಬಗ್ಗೆ  ಶಾಸಕ ಡಾ ಸುಧಾಕರ್, ಮತ್ತೊಬ್ಬ ಒಕ್ಕಲಿಗ ನಾಯಕನಿಗೆ ಅನ್ಯಾಯವಾಗಿದೆ. ನನ್ನ ನೈತಿಕ ಬೆಂಬಲ ನಿಮಗಿದೆ ಗೌಡರೇ ಎಂದು ಟ್ವೀಟ್ ಮಾಡಿದ್ದಾರೆ. 

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next