Advertisement

Yettinahole: ನಮ್ಮ ಸರಕಾರದ ಸಾಕ್ಷಿಗುಡ್ಡೆ ಎತ್ತಿನಹೊಳೆ: ಡಿಸಿಎಂ ಡಿ.ಕೆ. ಶಿವಕುಮಾರ್‌

02:48 AM Sep 07, 2024 | Team Udayavani |

ಸಕಲೇಶಪುರ: ಎತ್ತಿನಹೊಳೆ ಯೋಜನೆ ಜಾರಿಗೊಳ್ಳಲು ಸಾಧ್ಯವೇ ಇಲ್ಲ. ಹಾಗೊಂದು ವೇಳೆ ಜಾರಿಯಾದರೆ ತಲೆಬೋಳಿಸಿಕೊಳ್ಳುತ್ತೇವೆ ಎಂದು ಕೆಲವರು ಹೇಳಿದ್ದರು. ಅಂತಹ ಟೀಕಾಕಾರರಿಗೆ ಇಂದು ಅದೇ ಯೋಜನೆಯ ಪ್ರಮುಖ ಘಟ್ಟಕ್ಕೆ ಚಾಲನೆ ನೀಡುತ್ತಿರುವುದೇ ನಮ್ಮ ಸರಕಾರದ ಸಾಕ್ಷಿಗುಡ್ಡೆಯಾಗಿದೆ ಎಂದು ಉಪ ಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್‌ ತಿರುಗೇಟು ನೀಡಿದರು.

Advertisement

ಸಕಲೇಶಪುರ ತಾಲೂಕಿನ ಹೆಬ್ಬನಹಳ್ಳಿಯಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆ ಹಂತ-1ರ ಕಾಮಗಾರಿಗಳ ಉದ್ಘಾಟನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಗೌರಿಹಬ್ಬದಂದು ಗಂಗಾ ಮಾತೆ ಗುಡ್ಡ, ಬೆಟ್ಟಗಳನ್ನು ಇಳಿದು ಬಯಲುಸೀಮೆ ಕಡೆಗೆ ಹರಿಯುತ್ತಿದ್ದಾಳೆ. ಈ ಶುಭ ಯೋಜನೆ ಲೋಕಾರ್ಪಣೆ ಆಗುವ ದಿನವಾದ ಕಾರಣಕ್ಕೆ ಯಾರ ಬಗ್ಗೆಯೂ ಟೀಕೆ ಮಾಡಲು ಹೋಗುವುದಿಲ್ಲ. ಬಸವಣ್ಣನವರ ನುಡಿದರೆ ಮುತ್ತಿನ ಹಾರದಂತೆ ಇರಬೇಕು ಎನ್ನುವ ಮಾತಿನ ಮೇಲೆ ನಂಬಿಕೆ ಇಟ್ಟವರು ನಾವು. ಅವರ ಟೀಕೆಗಳಿಗೆ ವಿಧಾನಸಭೆಯಲ್ಲಿ ಉತ್ತರ ಕೊಡುತ್ತೇನೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next