Advertisement

ವಿಧಾನ ಪರಿಷತ್ ಚುನಾವಣೆ: ಬಿಜೆಪಿ ಅಭ್ಯರ್ಥಿಯಾಗಿ ವೈ.ಎಂ.ಸತೀಶ್ ಅವರು ನಾಮಪತ್ರ ಸಲ್ಲಿಕೆ  

12:09 PM Nov 23, 2021 | Team Udayavani |

ಬಳ್ಳಾರಿ: ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಗೆ ನಡೆಯುವ ಬಳ್ಳಾರಿ ಮತ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ವೈ.ಎಂ.ಸತೀಶ್ ಅವರು ನಾಮಪತ್ರ ಸಲ್ಲಿಸಿದರು.

Advertisement

ನಗರದ ಕನಕ ದುರ್ಗಮ್ಮ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಅಭ್ಯರ್ಥಿ ಸತೀಶ್ ಅವರು ಅಲ್ಲಿಂದ ನೇರವಾಗಿ ಸಾರಿಗೆ ಸಚಿವ ಬಿ.ಶ್ರೀರಾಮುಲು, ಶಾಸಕ ಜಿ.ಸೋಮಶೇಖರ ರೆಡ್ಡಿ ಸೇರಿ ಹಲವರೊಂದಿಗೆ ಡಿಸಿ ಕಚೇರಿಗೆ ಆಗಮಿಸಿ, ಜಿಲ್ಲಾಧಿಕಾರಿ,ಜಿಲ್ಲಾ ಚುನಾವಣಾಧಿಕಾರಿ ಪವನ್ ಕುಮಾರ್ ಮಾಲಪಾಟು ಅವರಿಗೆ ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಶ್ರೀರಾಮುಲು, ಬಿಜೆಪಿ ವೈ.ಎಂ.ಸತೀಶ್ ಅವರು ನಾಮಪತ್ರ ಸಲ್ಲಿಸಿದ್ದಾರೆ. ಅವರು ಮೊದಲಿಂದಲೂ ಬಿಜೆಪಿ ಪಕ್ಷದ ಸೇವಕರಾಗಿಬಕೆಲಸ ಮಾಡುತ್ತಿದ್ದಾರೆ. ಅವರು ದಾನಿಗಳಾದ ವೈ.ಮಹಾಬಲೇಶ್ವರಪ್ಪ ಅವರ ಕುಟುಂಬದಿಂದ ಬಂದವರಾಗಿದ್ದಾರೆ. ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳು ಸೇರಿ ಅವರನ್ನು ಗೆಲ್ಲಿಸಲಿದ್ದಾರೆ

Advertisement

Udayavani is now on Telegram. Click here to join our channel and stay updated with the latest news.

Next