Advertisement

Yogeshwar ಬಾವನ ಕೊಲೆ ಪ್ರಕರಣ: ಇಬ್ಬರು ಆರೋಪಿಗಳು ಮತ್ತೆ ಸಿಐಡಿ ವಶಕ್ಕೆ

11:47 PM Dec 31, 2023 | Team Udayavani |

ರಾಮನಗರ: ಸಿ.ಪಿ.ಯೋಗೇಶ್ವರ್‌ ಬಾವ ಮಹದೇವಯ್ಯ ಅವರ ಕೊಲೆ ಪ್ರಕರಣದ ಇಬ್ಬರು ಆರೋಪಿಗಳನ್ನು ನ್ಯಾಯಾಲಯ ಮತ್ತೊಮ್ಮೆ ಸಿಐಡಿ ವಶಕ್ಕೆ ನ್ಯಾಯಾಲಯ ನೀಡಿದ್ದು, ಇನ್ನಿಬ್ಬರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

Advertisement

ಕೊಲೆ ಪ್ರಕರಣ ಸಿಐಡಿಗೆ ಹಸ್ತಾಂತರಗೊಂಡ ಹಿನ್ನೆಲೆಯಲ್ಲಿ ಸಿಐಡಿ ಪೊಲೀಸರು ಶನಿವಾರ ನಾಲ್ವರು ಆರೋಪಿಗಳನ್ನು 5 ದಿನಗಳ ಕಾಲ ತಮ್ಮ ವಶಕ್ಕೆ ನೀಡುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಆದರೆ ನ್ಯಾಯಾಲಯವು 1ನೇ ಆರೋಪಿ ಮುರುಗನ್‌ ಮತ್ತು 2ನೇ ಆರೋಪಿ ಪ್ರಭಾಕರ್‌ನನ್ನು ಮಾತ್ರ 3 ದಿನಗಳ ಕಾಲ ಸಿಐಡಿ ವಶಕ್ಕೆ ನೀಡಿದ್ದು, 3ನೇ ಆರೋಪಿ ಮದನ್‌ಕುಮಾರ್‌ ಮತ್ತು 4ನೇ ಆರೋಪಿ ರಾಧಾಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next