Advertisement

C. N. Ashwath Narayan: ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ

11:39 PM Oct 23, 2024 | Team Udayavani |

ಕೋಲಾರ: ಸಿ.ಪಿ. ಯೋಗೇಶ್ವರ್‌ ಕಾಂಗ್ರೆಸ್‌ ಸೇರ್ಪಡೆ ವಿಚಾರ ಬೇಸರ ತಂದಿದ್ದು, ಕಾಂಗ್ರೆಸ್‌ ವಿರುದ್ಧ ಬಹಳ ಸ್ಪಷ್ಟವಾಗಿ ನಿಂತಿದ್ದವರು ಯಾವ ಕಾರಣಕ್ಕಾಗಿ ಆ ಪಕ್ಷದ ಕಡೆ ವಾಲಿದ್ದಾರೆ ಎನ್ನುವುದು ಗೊತ್ತಿಲ್ಲ ಎಂದು ಮಾಜಿ ಉಪಮುಖ್ಯಮಂತ್ರಿ ಡಾ| ಸಿ. ಎನ್‌. ಅಶ್ವತ್ಥನಾರಾಯಣ ಅಸಮಾಧಾನ ವ್ಯಕ್ತಪಡಿಸಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿ, ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ವಿರುದ್ಧ ಇದ್ದವರು ಅವರು. ಬಿಜೆಪಿಯಲ್ಲಿ ಅವರಿಗೆ ಉತ್ತಮ ಸ್ಥಾನಮಾನವೂ ಸಿಕ್ಕಿತ್ತು. ಆದರೆ, ಇದೀಗ ಕಾಂಗ್ರೆಸ್‌ ಸೇರ್ಪಡೆಯಾಗಿರುವುದು ದುಃಖದ ವಿಚಾರ. ಚನ್ನಪಟ್ಟಣದಲ್ಲಿ ಬಿಜೆಪಿಯಿಂದಲೇ ಅಭ್ಯರ್ಥಿ ಮಾಡುವ ಇಂಗಿತವಿತ್ತು. ಆದರೆ ಕೆಲವು ಕಾರಣ ಗಳಿಂದ ಅವರಿಗೆ ನೋವಾಗಿದೆ.

ಇಂತಹ ಅಲೋಚನೆಗಳು ಬಂದಾಗ ಅವಕಾಶವಾದ ರಾಜಕಾರಣ ಆಗಲಿದೆ. ಬಿಜೆಪಿಯಲ್ಲಿ ಸ್ಪರ್ಧೆಗೆ ಹಿನ್ನಡೆಯಾಗುತ್ತದೆ ಎನ್ನುವ ಕಾರಣಕ್ಕೆ ಕಾಂಗ್ರೆಸ್‌ ಸೇರ್ಪಡೆಯಾಗಿದ್ದು, ಅವರು ಕಾಂಗ್ರೆಸ್‌ ಸೇರುವ ಮೂಲಕ ತಪ್ಪು ನಡೆ, ತಪ್ಪು ನಿರ್ಧಾರ ಕೈಗೊಂಡಿದ್ದಾರೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next