Advertisement

ಯೋಗೇಶ್ವರ್‌ಗೆ ಬಿಎಸ್‌ವೈ ಮೇಲೆ ಅಸಮಾಧಾನ?

10:45 PM Sep 20, 2019 | Team Udayavani |

ಬೆಂಗಳೂರು: ಮೈತ್ರಿ ಸರ್ಕಾರ ಪತನ ಗೊಳಿಸಲು ಮುಂಚೂಣಿಯಲ್ಲಿ ನಿಂತು ಕೆಲಸ ಮಾಡಿದ್ದ ಮಾಜಿ ಸಚಿವ ಸಿ.ಪಿ. ಯೋಗೇಶ್ವರ್‌ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ವಿರುದ್ಧ ಅಸಮಾಧಾನ ಹೊರ ಹಾಕಿದ್ದಾರೆ ಎನ್ನಲಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್‌ ಹಾಗೂ ಜೆಡಿಎಸ್‌ನ ಮೈತ್ರಿ ಸರ್ಕಾರದ ಬಗ್ಗೆ ಅಸಮಾಧಾನ ಹೊಂದಿದ್ದ ಎರಡೂ ಪಕ್ಷಗಳ ಶಾಸಕರನ್ನು ಬಿಜೆಪಿ ಕಡೆಗೆ ಸೆಳೆಯುವಲ್ಲಿ ಸಿ.ಪಿ. ಯೋಗೇಶ್ವರ್‌ ಪ್ರಮುಖ ಪಾತ್ರ ವಹಿಸಿದ್ದರು. ಅಲ್ಲದೇ ಅತೃಪ್ತ ಶಾಸಕರನ್ನು ಮುಂಬೈನಲ್ಲಿ ಒಂದೇ ಕಡೆ ಇರುವಂತೆ ನೋಡಿಕೊಳ್ಳುವಲ್ಲಿಯೂ ಯೋಗೇಶ್ವರ್‌ ಮುಂಚೂಣಿಯಲ್ಲಿದ್ದರು.

Advertisement

ಮೈತ್ರಿ ಸರ್ಕಾರ ಪತನಗೊಂಡು ಬಿಜೆಪಿ ಅಧಿಕಾರಕ್ಕೆ ಬರುವವರೆಗೂ ಸಿ.ಪಿ. ಯೋಗೇ ಶ್ವರ್‌, ಯಡಿಯೂರಪ್ಪ ಸೂಚನೆ ಯಂತೆ ನಡೆದುಕೊಂಡಿದ್ದು, ತಾವು ಚುನಾವಣೆಯಲ್ಲಿ ಸೋತಿದ್ದು, ಬಿಜೆಪಿ ಅಧಿಕಾರಕ್ಕೆ ಬಂದರೆ, ಯಡಿಯೂರಪ್ಪ ಸಂಪುಟದಲ್ಲಿ ಸಚಿವ ಸ್ಥಾನ ಸಿಗಲಿದೆ ಎಂಬ ನಿರೀಕ್ಷೆಯಲ್ಲಿದ್ದರು. ಆದರೆ, ಸರ್ಕಾರ ಬಂದ ಮೇಲೆ ಯಡಿಯೂರಪ್ಪ ತಮ್ಮನ್ನು ಸಂಪೂರ್ಣ ನಿರ್ಲಕ್ಷ್ಯ ಮಾಡುತ್ತಿದ್ದಾರೆ ಎನ್ನುವ ಅಸಮಾಧಾನವನ್ನು ಯೋಗೇಶ್ವರ್‌ ತಾವು ಕಾಂಗ್ರೆಸ್‌ ಹಾಗೂ ಜೆಡಿಎಸ್‌ನಿಂದ ಕರೆ ತಂದ ಅನರ್ಹ ಶಾಸಕರ ಎದುರೇ ಅಳಲು ತೋಡಿ ಕೊಂಡಿರುವುದು ತಿಳಿದು ಬಂದಿದೆ.

ಶುಕ್ರವಾರ ಅನರ್ಹ ಶಾಸಕರ ನಾಯಕ ರಮೇಶ್‌ ಜಾರಕಿಹೊಳಿ ಅವರನ್ನು ಬೆಂಗಳೂರಿನ ಸಪ್ತ ಸಚಿವರ ನಿವಾಸದಲ್ಲಿ ಭೇಟಿ ಮಾಡಿದ ಯೋಗೇಶ್ವರ್‌, ಆಪರೇಷನ್‌ ಕಮಲ ಮಾಡಲು ಜೊತೆ ಯಲ್ಲಿದ್ದ ಡಾ. ಅಶ್ವತ್ಥ್ ನಾರಾಯಣ್‌ ಅವರಿಗೆ ಡಿಸಿಎಂ ಸ್ಥಾನ ನೀಡಿದ್ದಾರೆ. ಲಕ್ಷ್ಮಣ್‌ ಸವದಿಯವರಿಗೆ ಉಪ ಮುಖ್ಯ ಮಂತ್ರಿ ಮಾಡಿಕೊಳ್ಳಲಿ, ಆದರೆ, ನನ್ನನ್ನು ಸಚಿವನಾಗಿ ಮಾಡದೇ ನಿರ್ಲಕ್ಷಿಸಿದ್ದಾರೆ ಎಂದು ಅಸಮಾಧಾನ ಹೊರ ಹಾಕಿದ್ದಾರೆ ಎಂದು ತಿಳಿದು ಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next