Advertisement

ಯೋಗಿ ಆದಿತ್ಯನಾಥ್‌ ಪ್ರಚಾರ ಸಭೆ ರದ್ದು

09:38 AM Apr 17, 2019 | Lakshmi GovindaRaju |

ಬೆಂಗಳೂರು: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಮಂಗಳವಾರ ಬೆಳಗ್ಗೆ 6 ಗಂಟೆಯಿಂದ 72 ಗಂಟೆಗಳ ಕಾಲ ದೇಶದ ಯಾವುದೇ ಕ್ಷೇತ್ರದಲ್ಲಿ ಪ್ರಚಾರ ನಡೆಸುವಂತಿಲ್ಲ ಎಂದು ಕೇಂದ್ರ ಚುನಾವಣಾ ಆಯೋಗ ನಿರ್ಬಂಧ ವಿಧಿಸಿರುವ ಹಿನ್ನೆಲೆಯಲ್ಲಿ ಬುಧವಾರ ಯೋಗಿ ಆದಿತ್ಯನಾಥ್‌ ಅವರ ರಾಜ್ಯ ಭೇಟಿ ಕಾರ್ಯಕ್ರಮ ರದ್ದಾಗಿದೆ.

Advertisement

ಬುಧವಾರ ಬೀದರ್‌, ಕಲಬುರಗಿ ಹಾಗೂ ಹುಬ್ಬಳ್ಳಿ- ಧಾರವಾಡದಲ್ಲಿ ಸಾರ್ವಜನಿಕ ಸಭೆಯಲ್ಲಿ ಯೋಗಿ ಆದಿತ್ಯನಾಥ್‌ ಪಾಲ್ಗೊಳ್ಳಬೇಕಿತ್ತು. ಆದರೆ ಮಂಗಳವಾರ ಆಯೋಗವು ನಿರ್ಬಂಧ ವಿಧಿಸಿದ ಹಿನ್ನೆಲೆಯಲ್ಲಿ ಬುಧವಾರ ಆಯೋಜನೆಯಾಗಿದ್ದ ಕಾರ್ಯಕ್ರಮ ರದ್ದಾಗಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

Advertisement

Udayavani is now on Telegram. Click here to join our channel and stay updated with the latest news.

Next