Advertisement

ಯೋಗಿ-ಭಾಗವತ್‌ ಭೇಟಿ; ಜನಸಂಖ್ಯೆ ಅಸಮತೋಲನದ ಬಗ್ಗೆ ಚರ್ಚೆ

09:44 PM Oct 20, 2022 | Team Udayavani |

ಲಕ್ನೋ: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖ್ಯಸ್ಥರಾದ ಮೋಹನ್‌ ಭಾಗವತ್‌ ಅವರನ್ನು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಗುರುವಾರ ಭೇಟಿ ಮಾಡಿದ್ದಾರೆ.

Advertisement

ಭಾಗವತ್‌ ಅವರು ನಗರದಲ್ಲಿ ಅ.16-19ರವರೆಗೆ ನಡೆದ ಆರ್‌ಎಸ್‌ಎಸ್‌ ಸಭೆಯಲ್ಲಿ ಭಾಗವಹಿಸಿದ್ದರು. ಮೋಹನ್‌ ಭಾಗವತ್‌ ಹಾಗೂ ಯೋಗಿ ಅವರು ಸುಮಾರು ಒಂದು ಗಂಟೆಯ ಕಾಲ ಜನಸಂಖ್ಯೆ ಅಸಮತೋಲನ ಸಮಸ್ಯೆಯ ಬಗ್ಗೆ ಮಾತನಾಡಿದ್ದಾರೆ. ಮಧ್ಯಾಹ್ನ ಒಟ್ಟಿಗೆ ಊಟ ಮಾಡಿದ ನಂತರ ಯೋಗಿ ಲಕ್ನೋಗೆ ವಾಪಸಾಗಿದ್ದಾರೆ ಎಂದು ತಿಳಿಸಲಾಗಿದೆ.

ಜನಸಂಖ್ಯೆ ನಿಯಂತ್ರಣ ನೀತಿ ಕುರಿತು ವಿಸ್ತೃತ ಚರ್ಚೆ ನಡೆದಿದೆ. ಹೆಚ್ಚಳವನ್ನು ತಡೆಯಲು ಕಾನೂನು ರೂಪಿಸಿ ಕಟ್ಟುನಿಟ್ಟಾಗಿ ಜಾರಿಗೊಳಿಸುವ ಕುರಿತು ಮಾತುಕತೆ ನಡೆದಿದೆ ಎಂದು ಹೇಳಲಾಗಿದೆ. ಈ ಸಂದರ್ಭದಲ್ಲಿ ದತ್ತಾತ್ರೇಯ ಹೊಸಬಾಳೆ,  ಸಂಘದ ಉನ್ನತ ಪದಾಧಿಕಾರಿಗಳು  ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next