Advertisement

ಯೋಗೀಶಗೌಡ ಕೊಲೆ ಪ್ರಕರಣ; ಮತ್ತೆ ಚುರುಕಾದ ಸಿಬಿಐ ತನಿಖೆ

01:21 PM Jul 30, 2021 | Team Udayavani |

ಧಾರವಾಡ: ಹೆಬ್ಬಳ್ಳಿ ಜಿಪಂ ಕ್ಷೇತ್ರದ ಸದಸ್ಯರಾಗಿದ್ದ ಯೋಗೀಶಗೌಡ ಕೊಲೆ ಪ್ರಕರಣದ ಸಿಬಿಐ ತನಿಖೆ ಮತ್ತೆ ಚುರುಕುಗೊಂಡಿದ್ದು, ಗುರುವಾರ ಹಲವರನ್ನು ಉಪನಗರ ಠಾಣೆಗೆ ಕರೆಯಿಸಿಕೊಂಡ ಸಿಬಿಐ ಅಧಿಕಾರಿಗಳು ವಿಚಾರಣೆ ನಡೆಸಿದರು.

Advertisement

ಸಿಬಿಐ ಅಧಿಕಾರಿ ರಾಕೇಶ ರಂಜನ್‌ ನೇತೃತ್ವದ ತಂಡ ಕಳೆದ ಗುರುವಾರ ಕೂಡ ಮಹತ್ವದ ದಾಖಲೆಗಳನ್ನು ಕಲೆಹಾಕಿತ್ತು. ಇದೀಗ ಮತ್ತೆ ಗುರುವಾರ ಯೋಗೀಶಗೌಡ ಪತ್ನಿ ಮಲ್ಲಮ್ಮ, ಜಿಪಂ ಮಾಜಿ ಉಪಾಧ್ಯಕ್ಷ ಶಿವಾನಂದ ಕರಿಗಾರ ಹಾಗೂ ನಾಗರಾಜ ಗೌರಿ ಅವರನ್ನು ತೀವ್ರ ವಿಚಾರಣೆಗೆ ಒಳಪಡಿಸಿತು.

ಈ ಎಲ್ಲರಿಂದಲೂ ಮೊದಲು ಪ್ರತ್ಯೇಕವಾಗಿ, ನಂತರ ಜಂಟಿಯಾಗಿ ಮಾಹಿತಿ ಪಡೆದುಕೊಳ್ಳಲಾಗಿದೆ ಎನ್ನಲಾಗಿದೆ.

ಇನ್ನು ಇದೆ ಪ್ರಕರಣದಡಿ ಬಂಧನಕ್ಕೆ ಒಳಗಾಗಿರುವ ಮಾಜಿ ಸಚಿವ ಹಾಗೂ ಕಾಂಗ್ರೆಸ್ ನಾಯಕ ವಿನಯ್ ಕುಲಕರ್ಣಿಯವರು ಜೈಲುವಾಸದಲ್ಲಿದ್ದಾರೆ. ಹಲವು ಬಾರಿ ಅರ್ಜಿ ಸಲ್ಲಿಸಿದರೂ ಜಾಮೀನು ಸಿಗದ ಹಿನ್ನೆಲೆ ಇನ್ನೂ ಬೆಳಗಾವಿ ಹಿಂಡಲಗಾ ಜೈಲಿನಲ್ಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next