Advertisement

ನೀವು ಫ್ರೀ ಹ್ಯಾಂಡ್‌,ದಂಧೆಗಳನ್ನು ಮಟ್ಟಹಾಕಿ;ಅಲೋಕ್‌ ಕುಮಾರ್‌ಗೆ ಸಿಎಂ

11:45 AM Sep 16, 2018 | |

ಬೆಂಗಳೂರು : ಬೆಂಗಳೂರು ನಗರ ಹೆಚ್ಚುವರಿ ಪೊಲೀಸ್‌ ಆಯುಕ್ತರಾಗಿ ನೇಮಕವಾಗಿರುವ ಅಲೋಕ್‌ ಕುಮಾರ್‌ ಅವರಿಗೆ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಮಹತ್ವದ ಜವಾಬ್ಧಾರಿ ನೀಡಿರುವ ಬಗ್ಗೆ ವರದಿಯಾಗಿದೆ. 

Advertisement

ಸಿಎಂ ಅವರು ಅಲೋಕ್‌ ಕುಮಾರ್‌ ಅವರಿಗೆ ಬೆಂಗಳೂರಿನಲ್ಲಿರುವ ಮೀಟರ್‌ ಬಡ್ಡಿ ದಂಧೆ, ಇಸ್ಪಿಟ್‌ ದಂಧೆ ಮತ್ತು ರೌಡಿಗಳ ಅಟ್ಟಹಾಸ ಸಂಪೂರ್ಣವಾಗಿ ಅಂತ್ಯಗೊಳಿಸಬೇಕು ಎಂದು ಕಟ್ಟಪ್ಪಣೆ ಹೊರಡಿಸಿದ್ದು, ನೀವು ಸ್ವತಂತ್ರವಾಗಿ ಕೆಲಸ ಮಾಡಿ, ನಿಮ್ಮ ಕೆಲಸದಲ್ಲಿ ಸರ್ಕಾರ ಯಾವುದೇ ಕಾರಣಕ್ಕೂ ಹಸ್ತಕ್ಷೇಪ ಮಾಡುವುದಿಲ್ಲ ಎಂದಿರುವುದಾಗಿ ವರದಿಯಾಗಿದೆ. 

ಉತ್ತರ ವಲಯ ಐಜಿಪಿಯಾಗಿದ್ದ ಅಲೋಕ್‌ ಕುಮಾರ್‌ ಅವರನ್ನು ಬೆಂಗಳೂರು ನಗರ ಹೆಚ್ಚುವರಿ ಪೊಲೀಸ್‌ ಆಯುಕ್ತರಾಗಿ(ಅಪರಾಧ) ನೇಮಕ ಮಾಡಲಾಗಿತ್ತು. 

Advertisement

Udayavani is now on Telegram. Click here to join our channel and stay updated with the latest news.

Next