Advertisement

ಜಿಲ್ಲಾಧಿಕಾರಿಗಳೇ ಕೋವಿಡ್ ವಿರುದ್ಧ ಹೋರಾಟದ ಯುದ್ಧ ಕಮಾಂಡರ್ ಗಳು: ಪ್ರಧಾನಿ ಮೋದಿ

03:52 PM May 18, 2021 | Team Udayavani |

ನವದೆಹಲಿ: ಕೋವಿಡ್ ವಿರುದ್ಧ ನೀವು ಯುದ್ಧ ಕಮಾಂಡರ್ ಗಳ ರೀತಿ ಹೋರಾಟ ನಡೆಸಬೇಕಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ(ಮೇ 18) ವಿಡಿಯೋ ಕಾನ್ಫರೆನ್ಸ್ ಮೂಲಕ ದೇಶದ ವಿವಿಧ ರಾಜ್ಯಗಳ ಜಿಲ್ಲಾಧಿಕಾರಿಗಳ ಜತೆ ಸಭೆ ನಡೆಸಿ ಸಲಹೆ ನೀಡಿದರು.

Advertisement

ಇದನ್ನೂ ಓದಿ:ಭಾರತ ಮಹಿಳಾ ಕ್ರಿಕೆಟ್ ತಂಡಕ್ಕೆ ಬ್ಯಾಟಿಂಗ್ ಕೋಚ್ ಆಗಿ ಶಿವಸುಂದರ್ ದಾಸ್ ಆಯ್ಕೆ

ಭಾರತಕ್ಕೆ ಕೋವಿಡ್ ಎರಡನೇ ಅಲೆ ಹರಡುತ್ತಿದ್ದು, ಈ ಸಂದರ್ಭದಲ್ಲಿ ಕೋವಿಡ್ ವಿರುದ್ಧ ಹೋರಾಟ ನಡೆಸಲು ನಿಮ್ಮೆಲ್ಲರ ಪಾತ್ರ ತುಂಬಾ ಮಹತ್ವದ್ದಾಗಿದೆ. ಈ ಹಿನ್ನೆಲೆಯಲ್ಲಿ ಈ ಹೋರಾಟದಲ್ಲಿ ನೀವು(ಜಿಲ್ಲಾಧಿಕಾರಿಗಳು) ಯುದ್ಧ ಕಮಾಂಡರ್ ಗಳಾಗಬೇಕು ಎಂದು ಪ್ರಧಾನಿ ಹೇಳಿದರು.

ಕೋವಿಡ್ ಮೊದಲ ಅಲೆಯ ಸಂದರ್ಭದಲ್ಲಿ ದೇಶದಲ್ಲಿ ಕೃಷಿ ಕ್ಷೇತ್ರವನ್ನು ಬಂದ್ ಮಾಡಿರಲಿಲ್ಲವಾಗಿತ್ತು. ಈ ವೇಳೆ ಗ್ರಾಮಸ್ಥರು ಸಾಮಾಜಿಕ ಅಂತರವನ್ನು ಕಾಪಾಡಿಕೊಂಡು ಕಾರ್ಯನಿರ್ವಹಿಸುವುದನ್ನು ಕಂಡು ಅಚ್ಚರಿಗೊಳಗಾಗಿರುವುದಾಗಿ ಪ್ರಧಾನಿ ತಿಳಿಸಿದರು.

ಗ್ರಾಮಸ್ಥರು ಮಾಹಿತಿಯನ್ನು ಗ್ರಹಿಸುತ್ತಾರೆ ಮತ್ತು ಅದನ್ನು ತಮ್ಮ ಅಗತ್ಯಗಳಿಗೆ ತಕ್ಕಂತೆ ಮಾರ್ಪಡಿಸಿಕೊಳ್ಳುತ್ತಾರೆ. ಇದು ನಮ್ಮ ಹಳ್ಳಿಗಳ ಶಕ್ತಿಯಾಗಿದೆ ಎಂದು ಪ್ರಧಾನಿ ಮೋದಿ ತಿಳಿಸಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next