Advertisement

Hindu Nation; ಅವಕಾಶ ನೀಡದಿರಲು ನೀವು ಮೊಘಲರಲ್ಲ: ವಿಜಯೇಂದ್ರ

09:29 PM Dec 18, 2023 | Team Udayavani |

ಬೆಂಗಳೂರು: “ಭಾರತವನ್ನು ಹಿಂದೂ ರಾಷ್ಟ್ರವಾಗಿಸಲು ಬಿಡುವುದಿಲ್ಲ’ ಎಂದು ಸಿಎಂ ಸಿದ್ದರಾಮಯ್ಯ ನೀಡಿರುವ ಹೇಳಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿರುಗೇಟು ನೀಡಿದ್ದು, ಹಿಂದೂ ರಾಷ್ಟ್ರ ಕಲ್ಪನೆ ಈ ದೇಶದ ಕೋಟ್ಯಂತರ ಜನರ ಸಂಕಲ್ಪ. ಅದಕ್ಕೆ ಅವಕಾಶ ನೀಡದಿರಲು ನೀವು ಮೊಘಲರಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Advertisement

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಈ ಬಗ್ಗೆ ಬರೆದುಕೊಂಡಿರುವ ಅವರು, ಮೊಘಲರೇ ಮತ್ತೆ ಹುಟ್ಟಿ ಬಂದರೂ ಈಗದು ಸಾಧ್ಯವಿಲ್ಲ . ಭಾರತವೆಂದರೆ ಹಿಂದುತ್ವ, ಹಿಂದುತ್ವ ಎಂದರೆ ಬಹುತ್ವ. ವಿವಿಧತೆಯನ್ನು ತನ್ನ ಒಡಲಲ್ಲಿರಿಸಿಕೊಂಡು ಏಕತೆಯನ್ನು ಮೆರೆಯುತ್ತಿರುವುದೇ ಭಾರತೀಯತೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಭಾರತೀಯ ಸಂಸ್ಕೃತಿಯನ್ನು ನಾಶಪಡಿಸಲು ಶತಮಾನಗಳಿಂದಲೂ ಹೊರಗಿನವರ ಆಕ್ರಮಣ ನಡೆಯುತ್ತಲೇ ಇದೆ. ಮೊಘಲರ ನಿರಂತರ ದಾಳಿಗೆ ತುತ್ತಾಗಿ ಅಸಂಖ್ಯಾತ ಹಿಂದೂ ದೇವಾಲಯಗಳು ಭಗ್ನಗೊಂಡಿರುವುದಕ್ಕೆ, ನಾಮಾವಶೇಷಗೊಂಡಿರುವುದಕ್ಕೆ ಇಂದಿಗೂ ಸಾಕ್ಷಿ, ಪುರಾವೆಗಳು ನಮ್ಮ ಕಣ್ಣಿಗೆ ರಾಚುತ್ತಿವೆ. ಎಷ್ಟೇ ದುರಾಕ್ರಮಣಗಳು ನಡೆದರೂ ಬಹುತ್ವ ಸಂಸ್ಕೃತಿಯ ಹಿಂದುತ್ವದ ಭಾರತ ಗಟ್ಟಿಯಾಗಿ ಉಳಿದಿದೆ ಎಂದು ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next