Advertisement

ಸೆಲ್ಫಿ ತಂದ ಆಪತ್ತು |ಸಮುದ್ರ ಪಾಲಾದ ಹಾನಗಲ್ ಮೂಲದ ವ್ಯಕ್ತಿ

07:02 PM Aug 21, 2021 | Team Udayavani |

ಕುಮಟಾ: ಕಲ್ಲು ಬಂಡೆಯ ಮೇಲೆ ನಿಂತು ಸೆಲ್ಫಿ ತೆಗೆಯುತ್ತಿದ್ದ ಯುವಕ ಕಾಲುಜಾರಿ ಸಮುದ್ರ ಪಾಲಾದ ಘಟನೆ ತಾಲೂಕಿನ ಗೋಕರ್ಣದ ಓಂ ಬೀಚ್ ನಲ್ಲಿ ನಡೆದಿದೆ.

Advertisement

ಹಾನಗಲ್ ಮೂಲದ ಶೇಕಪ್ಪ ಕಮಾಟಿ (35) ಸಮುದ್ರಪಾಲಾದ ವ್ಯಕ್ತಿ. ಶನಿವಾರ ಮಧ್ಯಾನ್ಹ ಹಾನಗಲ್ ನಿಂದ ಗೋಕರ್ಣಕ್ಕೆ 12 ಜನರೊಂದಿಗೆ ಆಗಮಿಸಿದ್ದ, ಈತ ಓಂ ಬೀಜ್ ನ ಬಲಭಾಗದಲ್ಲಿರುವ ಸಮುದ್ರ ತೀರದ ಕಲ್ಲುಬಂಡೆ ಬಳಿ ಸೆಲ್ಫಿ ತೆಗೆದುಕೊಳ್ಳಲು ತೆರಳಿದ್ದ. ಈ ವೇಳೆ ಅಲೆಗಳ ಹೊಡೆತಕ್ಕೆ ಸಮುದ್ರದಲ್ಲಿ ಕೊಚ್ಚಿಹೋಗಿದ್ದಾನೆ.

ಸ್ಥಳಕ್ಕೆ ಧಾವಿಸಿದ ಲೈಫ್ ಗಾರ್ಡಗಳು ರಕ್ಷಣೆಗೆ ಮುಂದಾದರೂ ಕೂಡ ಯಾವುದೇ ಪ್ರಯೋಜನವಾಗಲಿಲ್ಲ.    ಸದ್ಯ ಶವಕ್ಕಾಗಿ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next