Advertisement

ಯುವಕನ ಆತ್ಮಹತ್ಯೆ- ಐಪಿಎಲ್ ಬೆಟ್ಟಿಂಗ್ ದಂಧೆಯಲ್ಲಿ ಹಣ ಕಳೆದುಕೊಂಡಿರುವ ಶಂಕೆ

10:28 PM Oct 30, 2020 | mahesh |

ಚಿಕ್ಕಬಳ್ಳಾಪುರ: ಸಾಲಗಾರರ ಕಾಟ ತಾಳಲಾರದೆ ಯುವಕನೊಬ್ನ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಚಿಕ್ಕಬಳ್ಳಾಪುರ ಗ್ರಾಮಾಂತರ ಪೋಲಿಸ್ ಠಾಣಾ ವ್ಯಾಪ್ತಿಯ ಕಂದವಾರ ಬಳಿ ನಡೆದಿದೆ. ಜಿಲ್ಲೆಯ ಚಿಕ್ಕಬಳ್ಳಾಪುರ ಕಂದವಾರ ಸಮೀಪದ ನಿವಾಸಿ 32 ವರ್ಷದ ಪ್ರಜ್ಬಲ್ ಎಂದು ಗುರುತಿಸಲಾಗಿದೆ.

Advertisement

ಸಾಲಗಾರರ ಕಾಟವನ್ನು ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೋಲಿಸ್ ಮೂಲಗಳಿಂದ ತಿಳಿದುಬಂದಿದೆ ಆದರೇ ಐಪಿಎಲ್ ಬೆಟ್ಟಿಂಗ್ ದಂಧೆಯಲ್ಲಿ ಹಣ ಕಳೆದುಕೊಂಡು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗುತ್ತಿದೆ.

ಈ ಸಂಬಂಧ ಗ್ರಾಮಾಂತರ ಪೋಲಿಸ್‍ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಪೋಲಿಸರು ತನಿಖೆ ಕೈಗೊಂಡಿದ್ದಾರೆ ಜಿಲ್ಲೆಯಲ್ಲಿ ಐಪಿಎಲ್ ಬೆಟ್ಟಿಂಗ್ ದಂಧೆಯಿಂದ ಅಮಾಯಕ ಯುವಕರು ಪ್ರಾಣವನ್ನು ಕಳೆದುಕೊಂಡಂತಾಗಿದ್ದು ನಿನ್ನೆಯಷ್ಟೆ ಜಿಲ್ಲೆಯ ಚಿಂತಾಮಣಿ ನಗರದಲ್ಲಿ ಐಪಿಎಲ್ ಬೆಟ್ಟಿಂಗ್ ದಂಧೆಯಲ್ಲಿ ಭಾಗಿಯಾಗಿದ್ದ ಮುಖ್ಯ ಪೋಲೀಸ್ ಪೇದೆಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೊಳಪಡಿಸಿರುವುದು ಇಲ್ಲಿ ಸ್ಮರಿಸಬಹುದಾಗಿದೆ.

ಈ ಕುರಿತು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಮಿಥುನ್‍ಕುಮಾರ್ ಅವರನ್ನು ಉದಯವಾಣಿ ಸಂಪರ್ಕಿಸಿದಾಗ ಜಿಲ್ಲೆಯಲ್ಲಿ ಐಪಿಎಲ್ ಬೆಟ್ಟಿಂಗ್ ದಂಧೆಯಲ್ಲಿ ಸಿಲುಕಿ ಯಾರು ಆತ್ಮಹತ್ಯೆ ಮಾಡಿಕೊಂಡಿಲ್ಲ ಪ್ರಜ್ವಲ ಎಂಬಾತನ ಆತ್ಮಹತ್ಯೆ ಬಗ್ಗೆ ತನಿಖೆ ನಡೆಸುತ್ತೇವೆ ಜಿಲ್ಲೆಯಲ್ಲಿ ಐಪಿಎಲ್ ದಂಧೆ ನಡೆಯುತ್ತಿರುವ ಕುರಿತು ಮಾಹಿತಿಗಳಿದ್ದರೇ ತಮಗೆ ನೇರವಾಗಿ ಮಾಹಿತಿ ನೀಡಬೇಕೆಂದು ಜಿಲ್ಲಾ ಎಸ್ಪಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next