Advertisement

ಮಂಗಳೂರು : ಕ್ವಾರಿ ಹೊಂಡದಲ್ಲಿ ಈಜಲು ಹೋದ ಯುವಕ ಸಾವು

09:51 PM Jul 24, 2022 | Team Udayavani |

ಮಂಗಳೂರು : ಉಲೈಬೆಟ್ಟು ಕಾಯರಪದವು ಎಂಬಲ್ಲಿ ಕೆಂಪು ಕಲ್ಲಿನ ಕ್ವಾರಿ ಮಳೆಗಾಲದ ನೀರು ತುಂಬಿದ ಹೊಂಡದಲ್ಲಿ ಈಜಲು ಹೋಗಿ ಯುವಕನೊಬ್ಬ ಸಾವನ್ನಪ್ಪಿರುವ ದುರ್ಘಟನೆ ಭಾನುವಾರ (ಆ. 24)ರಂದು ಸಂಜೆ ನಡೆದಿದೆ.

Advertisement

ಮೃತ ಯುವಕ ಜೋಕಟ್ಟೆ ನಿವಾಸಿ ಶಿಯಾಬ್ (21) ಎನ್ನುವವನಾಗಿದ್ದು, ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ.

ಶಿಯಾಬ್ ಹಾಗೂ ಆತನ ಗೆಳೆಯರು ಕ್ರಿಕೆಟ್ ಆಟವಾಡಿ ನಂತರ ಅಲ್ಲಿಯೇ ಮೈದಾನದ ಪಕ್ಕದ್ದಲ್ಲಿ ಈಜಲು ಹೋದಾಗ ಅವಘಡ ಸಂಭವಿಸಿದೆ. ಈ ಬಗ್ಗೆ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next