Advertisement

ಹೊಸಕೋಟೆ:ವಿವಾಹ ಆಗಬೇಕಿದ್ದ ಯುವತಿ ಫೋನ್‌ನಲ್ಲಿ ಸರಿಯಾಗಿ ಮಾತಾನಾಡದಕ್ಕೆ ನೇಣಿಗೆ ಶರಣಾದ ಯುವಕ

12:29 PM Apr 10, 2022 | Team Udayavani |

ಹೊಸಕೋಟೆ: ವಿವಾಹ ಆಗಬೇಕಿದ್ದ ಯುವತಿ ತನ್ನ ಜೊತೆ ಸರಿಯಾಗಿ ಮಾತನಾಡುತ್ತಿಲ್ಲ ಎಂದು ಕ್ಷುಲ್ಲಕ ಕಾರಣಕ್ಕೆ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

Advertisement

ತಾಲೂಕಿನ ನಂದಗುಡಿಯ ನಿವಾಸಿ ಹೋಮ್‌ ಗಾರ್ಡ್‌ ತೌಸೀಪ್‌ ಪಾಷ (27) ಮೃತ ದುರ್ದೈವಿ.

ನಿಶ್ಚಿತಾರ್ಥವಾಗಿದ್ದ ಹುಡುಗಿ ಫೋನ್‌ನಲ್ಲಿ ಮಾತನಾಡುವಂತೆ ಭಯ ಹುಟ್ಟಿಸಲು ಹೋಗಿ ನೇಣಿಗೆ ಶರಣಾಗಿರುವ ಘಟನೆ ಗುರುವಾರ ರಾತ್ರಿ ನಡೆದಿದೆ.

ನಂದಗುಡಿ ಪೊಲೀಸ್‌ ಠಾಣೆಯಲ್ಲಿ ಹೋಮ್‌ ಗಾರ್ಡ್‌ ಆಗಿ ಕಳೆದ 4 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದ ತೌಸೀಪ್‌ ಪಾಷ ಜೊತೆ ಹೊಸಕೋಟೆ ಮೂಲದ ಹುಡುಗಿಯೊಂದಿಗೆ ವಿವಾಹ ನಿಶ್ಚಿತಾರ್ಥವಾಗಿತ್ತು. ಗುರುವಾರ ರಾತ್ರಿ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಹುಡುಗಿಗೆ ಕರೆ ಮಾಡಿದ್ದು, ಫೋನ್‌ನಲ್ಲಿ ಮಾತನಾಡಲು ತಡ ಮಾಡಿದಕ್ಕೆ ವಿಡಿಯೋ ಕಾಲ್‌ ಮಾಡಿ “ನೀನು ಮಾತನಾಡಲಿಲ್ಲ ಎಂದರೆ ಫ್ಯಾನ್‌ಗೆ ನೇಣು ಹಾಕಿಕೊಳ್ಳುವೆ’ ಎಂದು ಹೇಳಿ ನೇಣು ಹಾಕಿಕೊಂಡು ಸಾವನ್ನಪ್ಪಿದ್ದಾನೆ.

ವಿಷಯ ತಿಳಿದ ಹುಡುಗಿ ಕಡೆಯವರು ನಂದಗುಡಿ ಪೊಲೀಸ್‌ ಠಾಣೆಗೆ ಸುದ್ದಿ ಮುಟ್ಟಿಸಿದ್ದಾರೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next